ಗುಜರಾತಿನಲ್ಲಿ ಬಿಜೆಪಿಗೆ ಅಭೂತಪೂರ್ವ ಜಯ: ಸುದರ್ಶನ್

Update: 2022-12-08 15:33 GMT

ಮಂಗಳೂರು: ಗುಜರಾತಿನಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದೆ. ಹಿಮಾಚಲ ಪ್ರದೇಶದಲ್ಲಿ ಜನ ಬದಲಾವಣೆ ಬಯಸಿದ್ದಾರೆ. ಆದರೆ ಬಿಜೆಪಿ ಅಲ್ಲಿಯೂ ಹೆಚ್ಚು ಮತಗಳಿಸುವಲ್ಲಿ ಯಶಸ್ವಿಯಾಗಿದೆ. ಗುಜರಾತಿನ ಫಲಿತಾಂಶ ದೇಶದಲ್ಲಿ ಮುಂದೆ ನಡೆಯಲಿರುವ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ ತಿಳಿಸಿದ್ದಾರೆ.

ಈ ಸಂದರ್ಭ ವಿಧಾನ ಪರಿಷತ್ ನಾಯಕ  ಪ್ರತಾಪ್ ಸಿಂಹ ನಾಯಕ್ , ದ.ಕ ಜಿಲ್ಲಾ ಬಿಜೆಪಿ  ಉಪಾಧ್ಯಕ್ಷ ಸಂತೋಷ್ ಕುಮಾರ್, ಮನಪಾ ಮೇಯರ್ ಜಯಾನಂದ, ಉಪಮೇಯರ್ ಪೂರ್ಣಿಮಾ, ಬಿಜೆಪಿ ಮುಖಂಡ ರಾದ ಕಸ್ತೂರಿ ಪಂಜ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಮನಪಾ ಸದಸ್ಯ ಸುಧೀರ್ ಶೆಟ್ಟಿ , ರವೀಂದ್ರ ಶೆಟ್ಟಿ ಉಳಿದೊಟ್ಟು, ರಣ್ ದೀಪ್ ಕಾಂಚನ್  ಹಾಗೂ ಇತರರು ಉಪಸ್ಥಿತರಿದ್ದರು.

Similar News