ಡಿ.10ರಿಂದ ಜನಾರ್ದನ ಹಾವಂಜೆ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ

Update: 2022-12-08 16:00 GMT

ಉಡುಪಿ, ಡಿ.8: ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಹಯೋಗದಲ್ಲಿ ಕಲಾವಿದರಾದ ಜನಾರ್ದನ ಹಾವಂಜೆ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಡಿ.10ರಿಂದ 14ರವರೆಗೆ ಉಡುಪಿಯ ಬಡಗುಪೇಟೆಯಲ್ಲಿರುವ ಹತ್ತು ಮೂರು ಇಪ್ಪಂತ್ತೆಂಟು ಗ್ಯಾಲರಿಯಲ್ಲಿ ನಡೆಯಲಿದೆ.

ಈ ಚಿತ್ರಕಲಾ ಪ್ರದರ್ಶನವನ್ನು ಡಿ.10ರಂದು ಸಂಜೆ 5 ಗಂಟೆಗೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ ಶೆಣೈ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮಾ ಹಾಗೂ ಲೇಖಕಿ ಡಾ.ಕಾತ್ಯಾಯನಿ ಕುಂಜಿಬೆಟ್ಟು ಉಪಸ್ಥಿತರಿರುವರು.

ಹಾವಂಜೆಯವರು ನಿಸರ್ಗದ ಬಗೆಗಿನ ಒಳನೋಟಗಳನ್ನು ತಾವೇ ಸ್ವತಃ ತಯಾರಿಸಿರುವ ಕಾಗದಗಳ ಮೇಲೆ ಜಲವರ್ಣ ಮಾಧ್ಯಮದಲ್ಲಿ ಅಭಿವ್ಯಕ್ತಿಸಿ ರುವ ಸುಮಾರು ಮೂವತ್ತರಷ್ಟು ಕಲಾಕೃತಿಗಳು ಪ್ರದರ್ಶನಕ್ಕಿರಲಿದ್ದು ಕಲಾ ಪ್ರದರ್ಶನವು ಡಿ.14ರವರೆಗೆ ಬೆಳಗ್ಗೆ 11ರಿಂದ ಸಂಜೆ 7ರವರೆಗೆ ಕಲಾಸಕ್ತರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Similar News