ಉಡುಪಿ | ಜೀಪ್ ಢಿಕ್ಕಿ: ಪಾದಚಾರಿ ಮೃತ್ಯು

Update: 2022-12-09 06:25 GMT

ಉಡುಪಿ, ಡಿ.9: ಜೀಪೊಂದು ಢಿಕ್ಕಿ (Accident) ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸಂತೆಕಟ್ಟೆ ಸಮೀಪದ ಎಲ್‌ವಿಟಿ ರಿಕ್ಷಾ ನಿಲ್ದಾಣದ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಡಿ.8ರಂದು ರಾತ್ರಿ 8 ಗಂಟೆ ಸುಮಾರಿಗೆ ನಡೆದಿದೆ.

ಮೃತರನ್ನು ಪುತ್ತೂರು ಗ್ರಾಮದ ನಯಂಪಳ್ಳಿಯ ಎಲ್.ವಿ.ಪಿ. ಶಾಲೆ ಸಮೀಪದ ನಿವಾಸಿ ರಾಮಚಂದ್ರ ಎಂದು ಗುರುತಿಸಲಾಗಿದೆ. ಎಲ್.ವಿ.ಟಿ. ರಿಕ್ಷಾ ನಿಲ್ದಾಣದಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ರಾಮಚಂದ್ರ ಅವರಿಗೆ ಬ್ರಹ್ಮಾವರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ ಆಂಧ್ರ ಪ್ರದೇಶ ಮೂಲದ ಜೀಪ್ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು, ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ. ಅಪಘಾತಕ್ಕೆ ಕಾರಣವಾದ ವಾಹನವನ್ನು ಚಾಲಕ ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾಗಿದ್ದಾನೆ.

ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News