ಆಂಧ್ರದ ರೌಡಿಶೀಟರ್ ಮೇಲೆ ಗುಂಡಿನ ದಾಳಿ: ದುಷ್ಕರ್ಮಿಗಳಿಗೆ ಶೋಧ

Update: 2022-12-09 12:50 GMT

ಬೆಂಗಳೂರು,ಡಿ.8: ಹಳೇ ದ್ವೇಷದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಮೂಲದ ಕುಖ್ಯಾತ ರೌಡಿ ಶಿವಶಂಕರ್ ರೆಡ್ಡಿ ಹಾಗೂ ಆತನ ಕಾರು ಚಾಲಕ ಅಶೋಕ್ ರೆಡ್ಡಿ ಮೇಲೆ ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ದುಷ್ಕರ್ಮಿಗಳ ಬಂಧನಕ್ಕೆ ವಿಶೇಷ ಪೊಲೀಸ್ ತಂಡಗಳು ತೀವ್ರ ಶೋಧ ಕೈಗೊಂಡಿವೆ. 

ಪ್ರಕರಣ ಪತ್ತೆಗಾಗಿ ರಚಿಸಲಾಗಿರುವ ಮೂರು ವಿಶೇಷ ಪೊಲೀಸ್ ತಂಡಗಳು, ಪರಾರಿಯಾಗಿರುವ ದುಷ್ಕರ್ಮಿಗಳ ಜಾಡು ಹಿಡಿದು ಕಾರ್ಯಾಚರಣೆ ಕೈಗೊಂಡಿವೆ ಎಂದು ಡಿಸಿಪಿ ಎಸ್.ಗಿರೀಶ್ ಅವರು ತಿಳಿಸಿದ್ದಾರೆ. 

ಮೂರು ಕೊಲೆ ಮತ್ತು ಒಂದು ಕೊಲೆ ಯತ್ನದಲ್ಲಿ ಶಿವಶಂಕರ್ ರೆಡ್ಡಿ(29) ಭಾಗಿಯಾಗಿದ್ದನು. ಶಿವಶಂಕರ್ ರೆಡ್ಡಿ ಹಾಗೂ ಬೈರಾ ರೆಡ್ಡಿ ಕುಟುಂಬಗಳ ನಡುವೆ ಹಲವು ವರ್ಷಗಳಿಂದ ದ್ವೇಷ ಹೊಂದಿತ್ತು. ಅದರಂತೆ 17ನೆ ವಯಸ್ಸಿನಲ್ಲಿ ಮೊದಲ ಕೊಲೆ ಮಾಡಿದ್ದ ಶಿವಶಂಕರ್ ರೆಡ್ಡಿ, 18ನೆ ವಯಸ್ಸಿನಲ್ಲಿ ಎರಡನೆ ಕೊಲೆ ಮಾಡಿದ್ದನು.
ಬಳಿಕ 23ನೆ ವರ್ಷದಲ್ಲಿ ಮೂರನೇ ಕೊಲೆ ಮಾಡಿದ್ದ. 2021ರಲ್ಲಿ ಶಿವಶಂಕರ್ ವಿರುದ್ಧ ಕೊಲೆ ಯತ್ನ ಪ್ರಕರಣ ಕೂಡ ದಾಖಲಾಗಿತ್ತು.

ಆಂಧ್ರಪ್ರದೇಶದ ಮದನಪಲ್ಲಿ ಠಾಣೆ ರೌಡಿಶೀಟರ್ ಆಗಿರುವ ಆರೋಪಿ ಶಿವಶಂಕರ್ ರೆಡ್ಡಿ ಮೇಲೆ ಸುಪಾರಿ ಕಿಲ್ಲರ್ಸ್ ಮೂಲಕ ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದ್ದು ಅದರ ಜಾಡು ಹಿಡಿದು ಕಾರ್ಯಾಚರಣೆ ಪೊಲೀಸ್ ತಂಡಗಳು ಕೈಗೊಂಡಿವೆ. 

Similar News