ಬೆಂಗಳೂರು: ಸಿಗರೇಟು ಕೇಳುವ ನೆಪದಲ್ಲಿ ಬೇಕರಿ ಸಿಬ್ಬಂದಿಗೆ ಮಾರಣಾಂತಿಕ ಹಲ್ಲೆ; ಪ್ರಕರಣ ದಾಖಲು
ಸೂಕ್ತ ಕ್ರಮಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ
Update: 2022-12-09 14:08 GMT
ಬೆಂಗಳೂರು, ಡಿ.9: ಸಿಗರೇಟ್ ಕೇಳುವ ನೆಪದಲ್ಲಿ ವಾಗ್ವಾದಕ್ಕಿಳಿದ ದುಷ್ಕರ್ಮಿಗಳು ಬೇಕರಿಯೊಂದರ ಸಿಬ್ಬಂದಿಗೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಹೆಚ್ಎಎಲ್ ವ್ಯಾಪ್ತಿಯ ಕುಂದಲಹಳ್ಳಿಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಆರೋಪಿಗಳ ತಂಡವು ರಾತ್ರಿ ಸಿಗರೇಟು ಕೇಳುವ ನೆಪದಲ್ಲಿ ಬೇಕರಿಗೆ ಬಂದಿದೆ. ಈ ವೇಳೆ ಕ್ಷುಲ್ಲಕ ಕಾರಣಕ್ಕಾಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.
ಊರು ಬಿಟ್ಟು ಬಂದಿದ್ದೀರಾ? ಎಂದು ಪ್ರಶ್ನಿಸಿ ಸಿಬ್ಬಂದಿ ಮೇಲೆ ಮಾರಣಾಂತಿಕವಾಗಿ ಹಲ್ಲೆಯನ್ನು ನಡೆಸಿದ್ದಾರೆ. ಈ ಸಂಬಂಧ ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾಂಧಲೆ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಪೊಲೀಸರಿಗೆ ಸೂಚಿಸಿದ್ದು, ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿ ಗಳಿಂದ ಮಾಹಿತಿ ಪಡೆದ ಸಚಿವರು ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.