ನಗರ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ

Update: 2022-12-09 15:48 GMT

ಮಂಗಳೂರು, ಡಿ.9: ಮಂಗಳೂರು ಮಹಾನಗರ ಪಾಲಿಕೆ, ಉಳ್ಳಾಲ ನಗರ ಸಭೆ ಹಾಗೂ ಮೂಡಬಿದಿರೆ ಪುರಸಭೆ ವ್ಯಾಪ್ತಿಯಲ್ಲಿ ತಲಾ ಒಬ್ಬರು ನಗರ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಹ ವಿಕಲಚೇತನದಿಂದ ಅರ್ಜಿ ಆಹ್ವಾನಿಸಲಾಗಿದೆ.

ಸ್ಥಳೀಯ ಕಾರ್ಯಕರ್ತರಾಗಿದ್ದು, 18ರಿಂದ 45 ವರ್ಷದ ಆರೋಗ್ಯವಂತರಾಗಿರಬೇಕು. ಎಸೆಸೆಲ್ಸಿ ಉತ್ತೀರ್ಣ ಅಥವಾ ಅನುತ್ತೀರ್ಣರಾಗಿರಬಹುದು. ಶೇ.40ರಷ್ಟು ಅಂಗವಿಕಲತೆ ಹಾಗೂ ವೈದ್ಯಕೀಯ ಮಂಡಳಿ ಪ್ರಮಾಣ ಪತ್ರ ಅಥವಾ ಗುರುವಿನ ಚೀಟಿ ಇರಬೇಕು. 2023ರ ಜನವರಿ 8 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಜಿಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಪಂ ಕಟ್ಟಡ, ಕೊಟ್ಟಾರ ಮಂಗಳೂರು ಇಲ್ಲಿಂದ ಪಡೆಯಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿಯ ಪ್ರಕಟನೆ ತಿಳಿಸಿದೆ.

Similar News