ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ

Update: 2022-12-09 17:23 GMT

ಮಂಗಳೂರು, ಡಿ.9: ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯು ಶುಕ್ರವಾರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಜರಗಿ ಮುಂದಿನ ವಿಧಾನಸಭಾ ಚುನಾವಣೆಯ ಬಗ್ಗೆ ಚರ್ಚಿಸಲಾಯಿತು.

ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್ ಮಾತನಾಡಿ, ಯುವ ಕಾಂಗ್ರೆಸ್ ವತಿಯಿಂದ ಅನಾವರಣಗೊಳಿಸಿರುವ "with IYC" ಎಂಬ ಆ್ಯಪ್ ಮೂಲಕ ಪ್ರತಿ ಬೂತ್‌ಗಳಲ್ಲಿ 5 ಮಂದಿ ಕಾರ್ಯಕರ್ತರನ್ನು ಸೇರಿಸಲಾಗುವುದು. ಈ ಮೂಲಕ ಜಿಲ್ಲಾದ್ಯಂತ ಯೂತ್ ಜೋಡೋ-ಬೂತ್ ಜೋಡೋ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿ ಪಕ್ಷ ಸಂಘಟನೆಗೆ ಆದ್ಯ್ಯತೆ ನೀಡಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಂಟಿ ಶೆಲ್ಕೆ, ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯಾ ಕೆ.ಆರ್. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮೆರಿಲ್ ರೇಗೊ, ಕೆಪಿಸಿಸಿ ಕಾರ್ಯದರ್ಶಿಗಳಾದ ಅಶಿತ್ ಪಿರೇರಾ, ನಾಸೀರ್ ಸಾಮಾಣಿಗೆ, ಜಿಲ್ಲಾ ಉಪಾಧ್ಯಕ್ಷರಾದ ಗಿರೀಶ್ ಆಳ್ವ, ಅಭಿಷೇಕ್ ಬೆಳ್ಳಿಪ್ಪಾಡಿ, ಸೌಮ್ಯಲತಾ ಮತ್ತಿತರರು ಉಪಸ್ಥಿತರಿದ್ದರು.

Similar News