×
Ad

ಸರಕಾರ ಅರಣ್ಯವಾಸಿಗಳ ಪರ ಬದ್ಧತೆ ಪ್ರಕಟಿಸಲಿ: ರವೀಂದ್ರ ನಾಯ್ಕ

Update: 2022-12-10 19:53 IST

ಭಟ್ಕಳ: ಸ್ವತಂತ್ರ್ಯ ಭಾರತದ ನಂತರದ ಸಾಮಾಜಿಕ ಸಮಸ್ಯೆಗಳಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಅರಣ್ಯ ಹಕ್ಕು ಕಾಯಿದೆ ಜಾರಿಗೆ ಬಂದಿದ್ದಾಗಿಯೂ ಅರಣ್ಯವಾಸಿಗಳು ಭೂಮಿ ಹಕ್ಕಿನಿಂದ ವಂಚಿತರಾಗುತ್ತಿರುವ ಹಿನ್ನೆಲೆಯಲ್ಲಿ ಮುಂಬರುವ ಬೆಳಗಾಂವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಸರಕಾರವು ಅರಣ್ಯವಾಸಿಗಳ ಪರ ಬದ್ಧತೆ ಪ್ರಕಟಿಸಬೇಕೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

ಅವರು ಶನಿವಾರ ಭಟ್ಕಳದಲ್ಲಿ ಅರಣ್ಯ ಅತಿಕ್ರಮಣದಾರರ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದು, ಡಿ.17ರಂದು ಶಿರಸಿಯಲ್ಲಿ ಅರಣ್ಯವಾಸಿಗಳನ್ನ ಉಳಿಸಿ ಜಾಥವನ್ನು  ಸಂಘಟಿಸಿಲಾಗಿದ್ದು ಸಹಸ್ರ ಸಂಖ್ಯೆಯಲ್ಲಿ ಅತಿಕ್ರಮಣದಾ ರರು ಭಾಗವಹಿಸುತ್ತಾರೆ ಎಂದರು.

ಅರಣ್ಯ ಹಕ್ಕು ಕಾಯಿದೆ ಅನುಷ್ಟಾನದಲ್ಲಿ ವೈಫಲ್ಯ ಹಾಗೂ ಕಾನೂನಿಗೆ ವ್ಯತಿರಿಕ್ತವಾಗಿ ಅರ್ಜಿಗಳನ್ನ ವಿಲೇವಾರಿ ಮಾಡಿರುವುದರಿಂದ ಅರಣ್ಯವಾಸಿಗಳು ಅರಣ್ಯ ಭೂಮಿ ಹಕ್ಕಿನಿಂದ ವಂಚಿತರಾಗುತ್ತಿರುವುದು ವಿಷಾದಕರ. ಅರಣ್ಯ ಭೂಮಿ ಹಕ್ಕು ನೀಡುವಲ್ಲಿ ಸರಕಾರ ಗಂಭೀರವಾಗಿ ಚಿಂತಿಸಬೇಕು. ಇಲ್ಲದಿದ್ದಲ್ಲಿ ಸುಫ್ರೀಂ ಕೋರ್ಟನ ಆದೇಶದಂತೆ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸಲಾಗುವ ಪ್ರಸಂಗ ಬಂದೊದಗಬಹುದೆಂಬ ಆತಂಕ ಅವರು ವ್ಯಕ್ತಪಡಿಸಿದರು.

ಡಿ. 17 ರಂದು ಶಿರಸಿಯಲ್ಲಿ ಜರುಗುವ ಅರಣ್ಯವಾಸಿಗಳನ್ನ ಉಳಿಸಿ ರ್ಯಾಲಿಗೆ ಭಟ್ಕಳ ತಾಲೂಕಿನಿಂದ ಸಹಸ್ರಾರು ಸಂಖ್ಯೆಯಲ್ಲಿ ಅರಣ್ಯ ಅತಿಕ್ರಮಣದಾರರು ಭಾಗವಹಿಸುವ ಕುರಿತು ಚರ್ಚೆಯ ಸಂದರ್ಭದಲ್ಲಿ ತೀರ್ಮಾನಿಸಲಾಯಿತು ಎಂದು ರವೀಂದ್ರ ನಾಯ್ಕ ತಿಳಿಸಿದರು.

ಜಿಲ್ಲಾ ಸಂಚಾಲಕ ದೇವರಾಜ ಗೊಂಡ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾಡಿದರು, ತಂಝೀಮ್ ಸಂಸ್ಥೆಯ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಗೋಮ ಮರಾಠಿ, ರಿಝ್ವಾನ್, ಅಬ್ದುಲ್ ಖಯ್ಯುಂ ಕೋಲಾ,  ಸಂಚಾಲಕರಾದ ಪಾಂಡುರಂಗ ನಾಯ್ಕ ಬೆಳಕೆ, ಮಂಜುನಾಥ ನಾಯ್ಕ ಹಾಡುವಳ್ಳಿ, ಶ್ಯಾಮಲಾ ಕುಂಟವಾಣಿ, ಫರಿದಾ ಜಾಲಿ, ನಾಗರಾಜ, ದಿವ್ಯಾ ಕರಿಕಲ್, ಮಾದೇವಿ ಕರಿಕಲ್ ಮುಂತಾದವರು ಉಪಸ್ಥಿತರಿದ್ದರು.

Similar News