ಬೈಕ್ ಪಲ್ಟಿ: ಸವಾರ ಮೃತ್ಯು

Update: 2022-12-10 15:37 GMT

ಕೊಲ್ಲೂರು, ಡಿ.10: ಬೈಕೊಂದು ಪಲ್ಟಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ವಂಡ್ಸೆ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಡೆದಿದೆ.

ಮೃತರನ್ನು ಯಡಮಗ್ಗೆ ಹಕ್ಲುಮನೆ ನಿವಾಸಿ ಶಿವರಾಮ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ಡಿ.8ರಂದು ಸಂಜೆ ವಂಡ್ಸೆ ಕಡೆಯಿಂದ ಬೆಳ್ಳಾಲ ಕಡೆಗೆ ಬೈಕಿನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಪಲ್ಟಿಯಾಯಿತೆನ್ನಲಾಗಿದೆ.  ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ಡಿ.9ರಂದು ಮಧ್ಯಾಹ್ನ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News