ದಾವಣಗೆರೆ: ನೀರು ತುಂಬಿದ್ದ ಬಕೆಟ್‌ಗೆ ಬಿದ್ದ ಮಗು ಮೃತ್ಯು

Update: 2022-12-11 05:06 GMT

ದಾವಣಗೆರೆ: ನೀರು ತುಂಬಿದ್ದ ಬಕೆಟ್ ಒಳಗೆ ಮಗುವೊಂದು ಬಿದ್ದು ಮೃತಪಟ್ಟ ಘಟನೆ ಶನಿವಾರ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ನಡೆದಿದೆ. 

ಗ್ರಾಮದ ಮಂಜುನಾಥ್ ಹಾಗೂ ತಾರ ದಂಪತಿಯ 10 ತಿಂಗಳ ಮಗು ಅನುಶ್ರಾವ್ಯ ಬಕೆಟ್ ನೀರಿನಲ್ಲಿ ಮುಳುಗಿ ಮೃತಪಟ್ಟಿದೆ. 

ಮಗು ಆಟವಾಡುತ್ತಿದ್ದಾಗ ನೀರು ತುಂಬಿದ ಬಕೆಟ್‌ಗೆ ಆಯತಪ್ಪಿ ಬಿದ್ದಿದೆ. ಇದಾದ ಸ್ವಲ್ಪ ಹೊತ್ತಿನ ಬಳಿಕ ಮಗುವಿನ ಪೋಷಕರು ಇದನ್ನು ನೋಡಿದ್ದಾರೆ. ತಕ್ಷಣ ಮಗುವನ್ನು ಜಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಮಗು ಮಾರ್ಗಮಧ್ಯೆಯೇ ಮೃತಪಟ್ಟಿದೆ ಎನ್ನಲಾಗಿದೆ. 

Similar News