ಜೀವನದಲ್ಲಿ ಜಿಗುಪ್ಸೆ; ವ್ಯಕ್ತಿ ಆತ್ಮಹತ್ಯೆ

Update: 2022-12-11 05:36 GMT

ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಗ್ರಾಮದ ರೈಲ್ವೆ ನಿಲ್ದಾಣದಲ್ಲಿ ವರದಿಯಾಗಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ವೀರನಪುರ ಗ್ರಾಮದ ಆನಂದಬಾಬು(40) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. 

ಜೀವನದಲ್ಲಿ ಜಿಗುಪ್ಸೆ ಉಂಟಾಗಿ ಶನಿವಾರ ರಾತ್ರಿ ದೊಡ್ಡಕವಲಂದೆ ಗ್ರಾಮದ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಕಂಬಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆನ್ನಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ರೈಲ್ವೆ ಪೊಲೀಸ್ ಠಾಣೆಯ ಎಎಸ್ಐ ಶ್ರೀನಿವಾಸ ಮೂರ್ತಿ, ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News