ಶ್ರೀರಾಮುಲುಗೆ ಅಂದು ಕಾಪಿ ಹೊಡೆಯುವುದರಲ್ಲಿ PHD, ಇಂದು ಭ್ರಷ್ಟಾಚಾರದಲ್ಲಿ...: ಕಾಂಗ್ರೆಸ್ ಟೀಕೆ

''ಯಾವೊಬ್ಬ ಬಿಜೆಪಿಗರಿಗೂ ಒಳ್ಳೆಯ ಇತಿಹಾಸವಿಲ್ಲವೇಕೆ?''

Update: 2022-12-11 10:33 GMT

ಬೆಂಗಳೂರು: 'ಬಿಜೆಪಿಯಲ್ಲಿ ರೌಡಿ ಮೋರ್ಚಾಗೆ ಮನ್ನಣೆ ಸಿಗುತ್ತಿರುವಾಗ ಬಿಜೆಪಿಗರು ಒಬ್ಬೊಬ್ಬರಾಗಿಯೇ ನಾನೂ ರೌಡಿಯಾಗಿದ್ದೆ, ನಾನೂ ಗೂಂಡಾಗಿರಿ ಮಾಡಿದ್ದೆ ಎಂದು ತಮ್ಮ ಅರ್ಹತೆಗಳನ್ನು ಮುಂದಿಡುತ್ತಿದ್ದಾರೆ' ಎಂದು ಕಾಂಗ್ರೆಸ್ ಟೀಕಿಸಿದೆ. 

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಕಾಂಗ್ರೆಸ್,  'ಸಾರಿಗೆ ಸಚಿವ ಶ್ರೀರಾಮುಲು ಅವರು ಅಂದು ಕಾಪಿ ಹೊಡೆಯುವುದರಲ್ಲಿ ಪಿಹೆಚ್‌ಡಿ ಮಾಡಿದ್ದರು ಇಂದು ಭ್ರಷ್ಟಾಚಾರದಲ್ಲಿ ಪಿಹೆಚ್‌ಡಿ ಮಾಡಿದ್ದಾರೆ' ಎಂದು ಲೇವಡಿ ಮಾಡಿದೆ. 

''ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಂಡಿಲ್ಲ, ಸೇರಿಸಿಕೊಳ್ಳುವುದಿಲ್ಲ ಎಂದಿದ್ದ ನಳಿನ್ ಕುಮಾರ್ ಕಟೀಲ್  ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮದೇ ಪಕ್ಷದವರು ಬೆತ್ತನಗೆರೆ ಶಂಕರನನ್ನು ಸೇರಿಸಿಕೊಂಡಿದ್ದೇವೆ ಎಂದು ಒಪ್ಪಿಕೊಂಡಿದ್ದಾರೆ. ಈಗ ನೀವು ಹೇಳಿದ್ದು ಸುಳ್ಳು ಎಂಬುದನ್ನು ಒಪ್ಪುತ್ತೀರಾ? ತಪ್ಪಾಗಿದೆ ಎಂದಾದರೆ ಏಕೆ ಇನ್ನೂ ಪಕ್ಷದಿಂದ ಹೊರಹಾಕಿಲ್ಲ?'' ಎಂದು ಕಾಂಗ್ರೆಸ್  ಪ್ರಶ್ನೆ ಮಾಡಿದೆ. 

ಇದನ್ನೂ ಓದಿ: ನಾನು ನಿಮ್ಮಷ್ಟು ಬುದ್ಧಿವಂತ ಅಲ್ಲ, ಗೂಂಡಾಗಿರಿ ಮಾಡ್ತಿದ್ದೆ...: ಕಾಲೇಜು ದಿನಗಳ ಮೆಲುಕು ಹಾಕಿದ ಸಚಿವ ಶ್ರೀರಾಮುಲು

Similar News