ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ನೆಚ್ಚರಿಕೆ

Update: 2022-12-11 18:04 GMT

ತಿರುವನಂತಪುರ, ಡಿ. 7: ಕೇರಳದಲ್ಲಿ ಮಂಗಳವಾರದ ವರೆಗೆ ಸಾಧಾರಣದಿಂದ ಹಿಡಿದು ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. 

ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಳಂ, ತ್ರಿಶೂರು, ಪಾಲಕ್ಕಾಡ್ ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ನಡುವೆ ಕೇರಳದ ಕೆಲವು ಭಾಗಗಳಲ್ಲಿ ಲಘು ಮಳೆಯಾಗಲಿದೆ ಎಂದು ಅದು ತಿಳಿಸಿದೆ. 
ಹವಾಮಾನ ಇಲಾಖೆ ರವಿವಾರ ಎರ್ನಾಕುಳಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಹಾಗೂ ಮಲಪ್ಪುರಂನಲ್ಲಿ ರವಿವಾರ ಯೆಲ್ಲೊ ಅಲರ್ಟ್ ಜಾರಿಗೊಳಿಸಿದೆ. 
ತಿರುವನಂತಪುರದಲ್ಲಿ ಡಿಸೆಂಬರ್ 17ರ ವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ ಎಂದು ಅದು ತಿಳಿಸಿದೆ.

Similar News