ಯುವಕ ನಾಪತ್ತೆ
Update: 2022-12-13 20:40 IST
ಉಡುಪಿ, ಡಿ.13: ಮಣಿಪಾಲದ ಪ್ರೆಸ್ನಲ್ಲಿ ಸೆಕ್ಯೂರಿಟಿ ಕೆಲಸ ಮಾಡಿ ಕೊಂಡಿದ್ದ ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ಕೊಳಂಬೆ ನಿವಾಸಿ ಅರುಣ ಗೌಡ (32) ಎಂಬ ವ್ಯಕ್ತಿಯು ಡಿಸೆಂಬರ್ 7ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
157 ಸೆಂ.ಮೀ. ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರ ಪ್ರಕಟಣೆ ತಿಳಿಸಿದೆ.