×
Ad

ಉಪ್ಪಿನಂಗಡಿ: ಗುಜರಿ ಹೆಕ್ಕುವ ನೆಪದಲ್ಲಿ ಕಳ್ಳತನ ಆರೋಪ; ಇಬ್ಬರನ್ನು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Update: 2022-12-13 21:17 IST

ಉಪ್ಪಿನಂಗಡಿ: ಗುಜರಿ ಹೆಕ್ಕುವ ನೆಪದಲ್ಲಿ ಮನೆಯಂಗಳಕ್ಕೆ ಭೇಟಿ ನೀಡಿ ಮನೆಯಲ್ಲಿರುವ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದ ಘಟನೆಗೆ ಸಂಬಂಧಿಸಿ ಸ್ಥಳೀಯರು ಇಬ್ಬರನ್ನು ಹಿಡಿದು ಪೊಲೀಸರಿಗೊಪ್ಪಿಸಿಸದ ಘಟನೆ ಮಂಗಳವಾರ ಉಪ್ಪಿನಂಗಡಿಯಲ್ಲಿ ನಡೆದಿದೆ.

ಮಂಗಳವಾರ ನಸುಕಿನ ವೇಳೆ ಸಂಗಮ್ ಸೌಂಡ್ಸ್ ಮಾಲಕರ ಮನೆಯಂಗಳಕ್ಕೆ ಬಂದ ಇಬ್ಬರು ಅಲ್ಲಿದ್ದ  ಮೆಟಲ್ ಚೋಕ್ ಹಾಗೂ ನಾಯಿಯ ಸರಪಳಿಯನ್ನು ಕದ್ದೊಯ್ದಿದ್ದಾರೆ. ಈ ಬಗ್ಗೆ ಅರಿವಿಗೆ ಬಂದಾಕ್ಷಣ ಸ್ಥಳೀಯ ಸಿಸಿ ಕ್ಯಾಮಾರಾವನ್ನು ವೀಕ್ಷಿಸಿ ಅವರ ಗುರುತು ಪತ್ತೆ ಹಚ್ಚಿ, ಪೇಟೆಯಲ್ಲಿಯೇ ಇದ್ದ ಇಬ್ಬರನ್ನೂ ಹಿಡಿದು ಪೊಲೀಸರಿಗೊಪ್ಪಿಸಲಾಯಿತು.

ಓರ್ವ ದಾವಣಗೆರೆಯ ಹರಪ್ಪನಹಳ್ಳಿ ತಾಲೂಕಿನ ಶಿವ ಯಾನೆ ಧರ್ಮ ನಾಯಕ್  (39) ಹಾಗೂ ಇನ್ನೋರ್ವ ಗದಗ್ ಜಿಲ್ಲಾ ಮುಂಡರಿಲ್ಲಾ ನಿವಾಸಿ ಪ್ರದೀಪ್ ಯಾನೆ ಚಟ್ರಪ್ಪ (27) ಎಂದು ತಿಳಿದು ಬಂದಿದೆ.  ವಶಕ್ಕೆ ಪಡೆದ ಪೊಲೀಸರು ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

Similar News