ಲಾರಿ ಢಿಕ್ಕಿ: ಪಾದಚಾರಿ ಮೃತ್ಯು

Update: 2022-12-14 15:51 GMT

ಹಿರಿಯಡ್ಕ, ಡಿ.14: ಟಿಪ್ಪರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಡಿ.14ರಂದು ಬೆಳಗ್ಗೆ ಪೆರ್ಡೂರು ಮೇಲ್ಪೇಟೆ ಎಂಬಲ್ಲಿ ನಡೆದಿದೆ.

ಮೃತರನ್ನು ಪೆರ್ಡೂರು ದೊಡ್ಡಮನೆ ನಿವಾಸಿ ಮಂಜಯ್ಯ ಶೆಟ್ಟಿ, ಎಂದು ಗುರುತಿಸಲಾಗಿದೆ. ಪೆರ್ಡೂರು ಮೇಲ್ಪೇಟೆಯಲ್ಲಿ ಪಂಕ್ಚರ್ ಹಾಕಲು ಬಂದಿದ್ದ ಲಾರಿಯನ್ನು  ಚಾಲಕನು ಒಮ್ಮೆಲೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಲಾರಿಯು ರಸ್ತೆಯಲ್ಲಿ ಪೆರ್ಡೂರು ಕಡೆಗೆ ನಡೆದು ಕೊಂಡು ಹೋಗುತ್ತಿದ್ದ ಮಂಜಯ್ಯ ಶೆಟ್ಟಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರ ಪರಿಣಾಮ ರಸ್ತೆಗೆ ಬಿದ್ದ ಮಂಜಯ್ಯ ಶೆಟ್ಟಿ ಲಾರಿಯ ಚಕ್ರಗಳ ಅಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News