×
Ad

ಸಾಂಸ್ಕೃತಿಕ ಹಬ್ಬಕ್ಕೆ ಸ್ವಚ್ಚತೆಯೊಂದಿಗೆ ಸಿದ್ದರಾಗೋಣ: ಡಾ. ಕುಮಾರ್

Update: 2022-12-16 20:48 IST
ಮಂಗಳೂರು, ಡಿ.16: ಅಂತರಾಷ್ಟ್ರೀಯ ಜಾಂಬೂರಿ ಕೇವಲ ಕಾಲೇಜು ಮಾತ್ರವಲ್ಲದೆ ಗ್ರಾಮಗಳಲ್ಲಿ ನಡೆಯುವ ಸಾಂಸ್ಕೃತಿಕ ಹಬ್ಬವಾಗಿದೆ ಎಂದು ದ.ಕ.ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್ ಅಭಿಪ್ರಾಯಪಟ್ಟರು. ‘ನಮ್ಮ ಸಂಸ್ಕೃತಿ ನಮ್ಮ ಸ್ವಚ್ಚತೆ’ ಎಂಬ ಹೆಸರಿನಲ್ಲಿ ಸ್ವಚ್ಚತಾ ಶ್ರಮದಾನವನ್ನು ನಡೆಸುವ ಬಗ್ಗೆ ನಗರದ ಕೊಟ್ಟಾರದಲ್ಲಿರುವ ದ.ಕ.ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಮೂಡುಬಿದಿರೆಯನ್ನು ಸಂಪರ್ಕಿಸುವ ಮಾರ್ಗಗಳ ಇಕ್ಕೆಲಗಳಲ್ಲಿ ಹಲವಾರು ಕಡೆ ಬ್ಲಾಕ್ ರೆನ್‌ಗಳಿದ್ದು ಅವುಗಳನ್ನು ಸ್ವಚ್ಚಗೊಳಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು. ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಎನ್ನುವುದು ಕೇವಲ ಕಾಲೇಜು ಆವರಣದಲ್ಲಿ ಮಾತ್ರವಲ್ಲದೆ ಎಲ್ಲಾ ಗ್ರಾಮಗಳಲ್ಲಿ ನಡೆಯುವ ಸಾಂಸ್ಕೃತಿಕ ಹಬ್ಬವಾಗಿರುವುದರಿಂದ ಕಾರ್ಯಕ್ರಮದ ನಂತರವೂ ಸ್ವಚ್ಚತೆ ಕಾಪಾಡಿಕೊಳ್ಳಲು ಎಲ್ಲರೂ ಸಹಕರಿಸಬೇಕು ಎಂದು ಡಾ. ಕುಮಾರ್ ಕರೆ ನೀಡಿದರು. ಈ ಸಂದರ್ಭ ಜಿಲ್ಲಾ ಆರೋಗ್ಯಾಧಿಕಾರಿ ಕಿಶೋರ್ ಕುಮಾರ್, ಆಳ್ವಾಸ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ವಿವೇಕ್ ಆಳ್ವ, ಪಿಡಿಒ ಸುಧಾಕರ್ ಉಪಸ್ಥಿತರಿದ್ದರು.

Similar News