ಲಂಚಕ್ಕೆ ಬೇಡಿಕೆ ಆರೋಪ: ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಅಧಿಕಾರಿ

Update: 2022-12-16 18:11 GMT

ಬೆಂಗಳೂರು, ಡಿ. 16: ಮನೆಗೆ ಎಲೆಕ್ಟ್ರಿಕ್ ಮೀಟರ್ ಸಂಪರ್ಕ ನೀಡಲು 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಸ್ಕಾಂ ಅಧಿಕಾರಿ ಆನಂದ್‍ರನ್ನು ಲೋಕಾಯುಕ್ತ ಪೋಲೀಸರು ಬಂಧಿಸಿದ್ದಾರೆ.

ಬೆಸ್ಕಾಂ ಉತ್ತರ ವಿಭಾಗ ಎಇ ಆನಂದ್ ಮೀಟರ್ ಸಂಪರ್ಕ ನೀಡಲು ವ್ಯಕ್ತಿಯೊಬ್ಬರ ಬಳಿ 50 ಸಾವಿರ ರೂ. ಲಂಚ ಕೇಳಿದ್ದರು. ರಾಜಾಜಿನಗರದ ಮುಖ್ಯ ರಸ್ತೆಯಲ್ಲಿ ವ್ಯಕ್ತಿಯ ಬಳಿ 40 ಸಾವಿರ ರೂ. ಲಂಚವನ್ನು ಪಡೆಯುವ ವೇಳೆ ಲೋಕಾಯುಕ್ತ ಎಸ್‍ಪಿ ಅಶೋಕ್ ನೇತೃತ್ವದ ತಂಡ ದಾಳಿ ಮಾಡಿ ಆನಂದ್‍ನನ್ನು ಬಂಧಿಸಿದ್ದಾರೆ.

ಆನಂದ್ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಕೇಸ್ ದಾಖಲಿಸಿ, ವಶಕ್ಕೆ ಪಡೆದಿದ್ದು, ಅಧಿಕಾರಿಗಳು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.

Similar News