ಕೆಪಿಸಿಸಿ ಚುನಾವಣಾ ಸಮಿತಿ ಸದಸ್ಯರಾಗಿ ರಮಾನಾಥ ರೈ ನೇಮಕ
Update: 2022-12-19 16:18 GMT
ಮಂಗಳೂರು: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎ.ಐ.ಸಿ.ಸಿ ಯು ರಚಿಸಿರುವ ಕೆಪಿಸಿಸಿ ಚುನಾವಣಾ ಸಮಿತಿಗೆ ಸದಸ್ಯರನ್ನಾಗಿ ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಸಚಿವ ಬಿ. ರಮಾನಾಥ ರೈ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೋಮವಾರ ಆದೇಶ ಹೊರಡಿಸಿದ್ದಾರೆ.