ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಬಸವರಾಜ ಹೊರಟ್ಟಿ

Update: 2022-12-20 10:37 GMT

ಬೆಳಗಾವಿ, ಡಿ.20: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಾಳೆ (ಡಿ. 21) ಚುನಾವಣೆ  ನಡೆಯಲಿದ್ದು, ಬಿಜೆಪಿ ಎಂಎಲ್‌ಸಿ ಹಾಗೂ ಹಿರಿಯ ರಾಜಕಾರಣಿ ಬಸವರಾಜ್ ಹೊರಟ್ಟಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.

ಬೆಳಗಾವಿ ಸುವರ್ಣ ಸೌಧದಲ್ಲಿ ಎಂಎಲ್‌ಸಿ ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್ ಕಾರ್ಯದರ್ಶಿಗಳಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಿರಿಯ ಮುಖಂಡರು ಉಪಸ್ಥಿತರಿದ್ದರು. 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ, ನನಗೆ  ಇದೊಂದು ಅವಿಸ್ಮರಣೀಯ ದಿನ. ಸಿಎಂ ಬೊಮ್ಮಾಯಿ, ಯಡಿಯೂರಪ್ಪ, ಸಚಿವ ಅಶೋಕ್, ಮಂತ್ರಿಗಳು ನಾನು ನಾಮಪತ್ರ ಸಲ್ಲಿಸುವಾಗ  ಬಂದಿದ್ದಾರೆ. ಇದೊಂದು ನನ್ನ ಜಿವನದಲ್ಲಿ ಅತ್ಯಂತ ಅವಿಸ್ಮರಣೀಯ ದಿನ. ಈ ಹಿಂದೆ ನಾ‌ನು ಬಹಳ ಸಲ ನಾಮಪತ್ರ ಸಲ್ಲಿಸಿದ್ದೇನೆ, ಆಗ ಸಿಎಂ, ಇಷ್ಟು ಜನ ಬಂದಿರಲಿಲ್ಲ. ಹಿಂದೆ ರಾಮಕೃಷ್ಣ ಹೆಗಡೆ ಅವ್ರನ್ನ ಬಿಟ್ರೆ ಯಾರೂ ಬಂದಿರಲಿಲ್ಲ ಎಂದು ಹೇಳಿದರು. 

'ನಾನು ಅತ್ಯಂತ ವಿಶ್ವಾಸದಿಂದ ನಾಮಪತ್ರ ಸಲ್ಲಿಸಿದ್ದೇನೆ. ಪಕ್ಷ ನನ್ನ ಮೇಲೆ ಇಟ್ಟಿರುವ ನಂಬಿಕೆ, ವಿಶ್ವಾಸವನ್ನು ಎಂದೆಂದೂ ದುರುಪಯೋಗ ಮಾಡಲ್ಲ' ಎಂದು ತಿಳಿಸಿದರು.  

Similar News