ಕುಲಪತಿ ನೇಮಕಕ್ಕೆ ಲಂಚ ನೀಡಬೇಕೆಂದು BJP ಸಂಸದ ಪ್ರತಾಪ್ ಸಿಂಹ ಹೇಳಿಕೆ; ಮೇಲ್ಮನೆಯಲ್ಲಿ ಪ್ರತಿಧ್ವನಿ

Update: 2022-12-21 13:50 GMT

ಬೆಳಗಾವಿ, (ಸುವರ್ಣಸೌಧ) ಡಿ.21: ವಿಶ್ವವಿದ್ಯಾಲಯ ಉಪಕುಲಪತಿ ಹುದ್ದೆ ನೇಮಕಕ್ಕೆ ಕೋಟ್ಯಂತರ ರೂಪಾಯಿ ಲಂಚ ನೀಡಬೇಕೆಂದಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ಬುಧವಾರ ವಿಧಾನ ಪರಿಷತ್ತಿನಲ್ಲಿ ಪ್ರತಿಧ್ವನಿಸಿತು.

ಬುಧವಾರ ಭೋಜನ ವಿರಾಮದ ಬಳಿಕ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಪ್ರಸ್ತಾಪಿಸಿ, ಕುಲಪತಿ ನೇಮಕ ವಿಚಾರವಾಗಿ ಲಂಚ ನೀಡುವುದರ ಕುರಿತ ಚರ್ಚೆಯನ್ನು ಕೈಗೆತ್ತಿಕೊಳ್ಳಬೇಕೆಂದು ಸಭಾಪತಿ ಹೊರಟ್ಟಿ ಅವರಲ್ಲಿ ಮನವಿ ಮಾಡಿದರು.

ಆದರೆ, ಇದಕ್ಕೆ ಏಕಾಏಕಿ ಅವಕಾಶ ನೀಡಲು ಸಾಧ್ಯವಿಲ್ಲ. ನೋಟಿಸ್ ನೀಡಿದರೆ, ಆನಂತರ ಪರಿಗಣಿಸುತ್ತೇನೆ ಎಂದು ಬಸವರಾಜ ಹೊರಟ್ಟಿ ಹೇಳಿದರು.ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ವಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಧರಣಿಗೆ ಮುಂದಾದರು.

ಆನಂತರ, ವಿಷಯ ಚರ್ಚೆಗೆಅವಕಾಶ ನೀಡುವೆ. ಆದರೆ, ಈಗಲೇ ಚರ್ಚೆಗೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ ಎಂದು ಹೊರಟ್ಟಿ ಹೇಳಿದಾಗ ಸದಸ್ಯರು ತಮ್ಮ ಆಸನಗಳಿಗೆ ತೆರಳಿದರು.

Similar News