ದಾವಣಗೆರೆ: ಹಾಡಹಗಲೇ ಯುವತಿಯ ಬರ್ಬರ ಕೊಲೆ

Update: 2022-12-22 07:22 GMT

ದಾವಣಗೆರೆ, ಡಿ.22: ನಗರದಲ್ಲಿ ಬೆಳಿಗ್ಗೆ ಯುವತಿಯೋರ್ವಳ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಪಿ. ಜೆ. ಬಡಾವಣೆಯ ಚರ್ಚ್ ರಸ್ತೆಯಲ್ಲಿನ ಲುಡ್ಸ್ ಶಾಲೆ ಸಮೀಪ ವರದಿಯಾಗಿದೆ. 

ಚಾಂದ್ ಸುಲ್ತಾನ್ (26) ಹತ್ಯೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಮೃತ ಮಹಿಳೆ ವಿನೋಬನಗರದಲ್ಲಿ ಆಡಿಟಿಂಗ್ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. 

ಚಾಂದ್ ಸುಲ್ತಾನ್ ಅವರು ಎಂದಿನಂತೆ ಗುರುವಾರ ಬೆಳಿಗ್ಗೆ ತನ್ನ ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದರೆನ್ನಾಗಿದ್ದು, ಈ ವೇಳೆ ದುಷ್ಕರ್ಮಿಯೊಬ್ಬ ತಡೆದು ನಿಲ್ಲಿಸಿ ಸುಲ್ತಾನ್ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡ ಮಹಿಳೆ ಸ್ಥಳಲ್ಲೇ ಕೊನೆಯುಸಿರೆಳೆದಿದ್ದಾರೆ‌. ಬಡಾವಣೆ ಪೊಲೀಸ್ ಠಾಣಾ ವ್ತಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮಹಿಳೆಯನ್ನು ಯಾಕೆ ಹತ್ಯೆ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಇನನ್ನಷ್ಟೇ ತಿಳಿದು ಬರಬೇಕಿದೆ. ನಗರದ ಮುಖ್ಯರಸ್ತೆಯಲ್ಲಿಯೇ ಈ ಘಟನೆ ನಡೆದಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಪೊಲೀಸರಿಂದ ಪರಿಶೀಲನೆ: ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸುತ್ತಮುತ್ತಲಿನ ಸ್ಥಳಗಳಲ್ಲಿನ ಸಿಸಿಟಿವಿ ಪರಿಶೀಲಿಸುತ್ತಿದ್ದು, ತನಿಖೆ ಆರಂಭಿಸಿದ್ದಾರೆ.

Similar News