ಚಾಮರಾಜನಗರ: ಮಾರಕಾಸ್ತ್ರದಿಂದ ತಲೆಗೆ ಹಲ್ಲೆ ನಡೆಸಿ ವ್ಯಕ್ತಿಯ ಹತ್ಯೆ

Update: 2022-12-22 10:51 GMT

ಚಾಮರಾಜನಗರ : ಮಾರಕಾಸ್ತ್ರದಿಂದ ವ್ಯಕ್ತಿಯೋರ್ವನ ತಲೆಗೆ ತಲೆಗೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಇಲ್ಲಿನ ಮಧುವನಹಳ್ಳಿ ಗ್ರಾಮದ ಜಿ.ವಿ ಗೌಡ ನಗರದಲ್ಲಿ ವರದಿಯಾಗಿದೆ.

ಮಹದೇವಸ್ವಾಮಿ ( 45)  ಕೊಲೆಯಾದ ವ್ಯಕ್ತಿಯಾಗಿದ್ದು, ಈ ಸಂಬಂಧ ಕೊಳ್ಳೇಗಾಲ  ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ವ್ಯಕ್ತಿಗೆ ಪತ್ನಿ , ಇಬ್ಬರು ಮಕ್ಕಳಿದ್ದಾರೆ. ಪತ್ನಿ ಹಾಗೂ ಮಕ್ಕಳು ಪ್ರವಾಸಕ್ಕೆ ತೆರಳಿದ್ದರೆನ್ನಲಾಗಿದ್ದು, ಕಿಡಿಗೇಡಿಗಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹದೇವ ಸ್ವಾಮಿ ತಲೆಗೆ ಹೊಡೆದು ಹತ್ಯೆಮಾಡಿದ್ದಾರೆ ಎನ್ನಲಾಗಿದೆ‌.

ವಿಚಾರ ತಿಳಿದ ಡಿವೈಎಸ್ಪಿ ಜಿ.ಯು. ಸೋಮೇಗೌಡ, ವೃತ್ತ ನಿರೀಕ್ಷಕ ಶಿವರಾಜ್ ಮುಧೋಳ್ ಹಾಗೂ ಸಬ್ ಇನ್ಸ್ ಪೆಕ್ಟರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

Similar News