ಸುರತ್ಕಲ್ | ಬೈಕ್ ಗಳಿಗೆ ಕಂಟೈನರ್ ಲಾರಿ ಢಿಕ್ಕಿ: ಬೈಕ್ ಸವಾರರಿಬ್ಬರು ಸೇರಿ ಮೂವರಿಗೆ ಗಾಯ

Update: 2022-12-24 09:39 GMT

ಸುರತ್ಕಲ್: ಕಂಟೈನರ್ ಲಾರಿಯೊಂದು ಬೈಕ್ ಗಳಿಗೆ ಢಿಕ್ಕಿಹೊಡೆದು ಬೈಕ್ ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಶನಿವಾರ ಇಲ್ಲಿನ ಕುಳಾಯಿ ಹೊನ್ನಕಟ್ಟೆ ಬಳಿ ವರದಿಯಾಗಿದೆ.

ಘಟನೆಯಿಂದ ಬೈಕ್ ನಲ್ಲಿ ಸಂಚರಿಸುತ್ತಿದ್ದ ಸವಾರರಿಬ್ಬರು ಮತ್ತು ಒರ್ವ ಪಾದಚಾರಿ ಮಹಿಳೆಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಮಂಗಳೂರು ಕಡೆಯಿಂದ ಸುರತ್ಕಲ್‌ ಭಾಗಕ್ಕೆ ಮಲ್ಟಿ ಚೇಸ್ ಕಂಟೈನರ್ ಹೋಗುತ್ತಿದ್ದ ವೇಳೆ ಏಕಾಏಕಿ ಸಿಗ್ನಲ್ ಬಿದ್ದಿದೆ ಎನ್ನಲಾಗಿದೆ. ಲಾರಿ ಅತಿಯಾದ ವೇಗದಲ್ಲಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಬಲಭಾಗಕ್ಕೆ ತಿರುಗಿಸಿದ್ದಾನೆ ಎನ್ನಲಾಗಿದೆ.

ಈ ವೇಳೆ ಲಾರಿ ಡಿವೈಡರ್ ಏರಿಕೊಂಡು ಎದುರಿನಿಂದ ಬರುತ್ತಿದ್ದ ಒಂದು ಸ್ಕೂಟಿ ಮತ್ತು ಒಂದು ಬೈಕ್ ಗೆ ಢಿಕ್ಕಿ ಹೊಡೆದಿದೆ‌. ಗಾಯಾಳುಗಳನ್ನು ತಕ್ಷಣ ಸಾರ್ವಜನಿಕರು ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯಿಂದ ಬೈಕ್ ಮತ್ತು ಸ್ಕೂಟಿ ಸಂಪೂರ್ಣ ನಜ್ಜು ಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Similar News