ಹಳ್ಳಾಡಿ-ಹರ್ಕಾಡಿ: ತೆಂಗಿನಕಾಯಿ‌ ಹೆಕ್ಕಲೆಂದು ತೆರಳಿದ್ದ ವೃದ್ಧೆ ತೆರೆದ ಬಾವಿಗೆ ಬಿದ್ದು ಮೃತ್ಯು

Update: 2022-12-27 07:14 GMT

ಕೋಟ: ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ‌ ಹೆಕ್ಕಲೆಂದು ತೆರಳಿದ್ದ ವೃದ್ಧೆಯೋರ್ವರು ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದು ಮೃತಪಟ್ಟ ಘಟನೆ‌ ಹಳ್ಳಾಡಿ-ಹರ್ಕಾಡಿ ಗ್ರಾಮದ ಗಾವಳಿಯ ಎಂಬಲ್ಲಿ ಡಿ.26ರಂದು ಬೆಳಿಗ್ಗೆ ನಡೆದಿದೆ.

ಮೃತರನ್ನು ಹಳ್ಳಾಡಿ-ಹರ್ಕಾಡಿ ಗ್ರಾಮದ ಗಾವಳಿಯ ನಿವಾಸಿ ಚಿಕ್ಕು ಎಂದು ಗುರುತಿಸಲಾಗಿದೆ. ಇವರು ನಿನ್ನೆ ಬೆಳಿಗ್ಗೆ 11:15ರ ಸುಮಾರಿಗೆ ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಲೆಂದು ಹೋಗಿದ್ದರು‌. ಈ ವೇಳೆ ಅಲ್ಲೆ ಪಕ್ಕದಲ್ಲಿ ಇದ್ದ ತೆರೆದ ಬಾವಿಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದಿದ್ದರು ಎನ್ನಲಾಗಿದೆ.

ತಕ್ಷಣವೇ ಅವರನ್ನು ಬಿದ್ಕಲಕಟ್ಟೆಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಅಲ್ಲಿ ಪರೀಕ್ಷಿಸಿದ ವೈದ್ಯರು ಚಿಕ್ಕು ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News