ದಿಲ್ಲಿ ನಾಯಕರಿಗೆ ಕಪ್ಪ ಕಾಣಿಕೆ ಕೊಡಲು ಸಿಎಂ ದಿಲ್ಲಿ ಭೇಟಿ: ಬಿ.ಕೆ.ಹರಿಪ್ರಸಾದ್

Update: 2022-12-27 10:21 GMT

ಬೆಳಗಾವಿ(ಸುವರ್ಣ ವಿಧಾನಸೌಧ), ಡಿ.27: ರಾಜ್ಯದ ಎಲ್ಲ ತಾಲೂಕುಗಳಲ್ಲಿ ಬಿಜೆಪಿ ಕಚೇರಿಗಳನ್ನು ತೆರೆಯಬೇಕಿದೆ. ಅದಕ್ಕಾಗಿ, ದಿಲ್ಲಿ ನಾಯಕರಿಗೆ ಕಪ್ಪ ಕಾಣಿಕೆ ಕೊಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿಲ್ಲಿಗೆ ಹೋಗಿ ಬಂದಿದ್ದಾರೆ ಎಂದು ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ದೂರಿದ್ದಾರೆ.

ಮಂಗಳವಾರ ಸುವರ್ಣ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿಗೆ ಕೆಲವು ಒಳ್ಳೆಯ ಸ್ನೇಹಿತರು ಇದ್ದಾರೆ. ಅವರ ಮೂಗಿಗೆ ಬೆಣ್ಣೆ ಹಚ್ಚುವುದಕ್ಕೆ ದಿಲ್ಲಿಗೆ ಹೋಗಿ ಬಂದಿದ್ದಾರೆ. ಈ ಸರಕಾರ ಆರು ತಿಂಗಳಲ್ಲ, ಆರು ದಿನಗಳು ನಡೆಯುತ್ತೋ ಇಲ್ವೋ ಗೊತ್ತಿಲ್ಲ ಎಂದು ಟೀಕಿಸಿದರು.

Similar News