ಕಾಲುವೆಗೆ ಬಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ: ಇಬ್ಬರು ಸಾವು

Update: 2022-12-30 14:22 GMT

ಬೆಂಗಳೂರು, ಡಿ.30: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾಂಕ್ರೀಟ್ ಮಿಕ್ಸರ್ ಲಾರಿ ಪಲ್ಟಿ ಹೊಡೆದು ಕಾಲುವೆಗೆ ಬಿದ್ದ ಪರಿಣಾಮ ಚಾಲಕ ಮತ್ತು ಕ್ಲೀನರ್ ಸಾವನ್ನಪ್ಪಿರುವ ಘಟನೆ ನೆಲಮಂಗಲದ ಸೊಂಡೆಕೊಪ್ಪ ಬಳಿ ನೆಡೆದಿದೆ. 

ಮೃತರನ್ನು ಬಿಜಾಪುರ ಜಿಲ್ಲೆಯ ಅಂಬಳನೂರು ಗ್ರಾಮದ ಸಿದ್ದಪ್ಪ(31) ಮತ್ತು ರಾಯಚೂರಿನ ಮಿಟೆಕೇಲೂರು ಗ್ರಾಮದ ಮುತ್ತು(25) ಎಂದು ಗುರುತಿಸಲಾಗಿದೆ. 

ಮೃತರಿಬ್ಬರು ಮಲ್ಲಾಪುರ ಗ್ರಾಮದ ಕಾಂಕ್ರೀಟ್ ಮಿಕ್ಸರ್ ಪ್ಲಾಂಟ್‍ನಲ್ಲಿ ಕೆಲಸ ಮಾಡುತ್ತಿದ್ದರು. ಮಾಗಡಿ ರಸ್ತೆಯ ತಾವರೆಕೆರೆಗೆ ಸಂಚರಿಸುವ ಮಾರ್ಗಮಧ್ಯೆ ಸೊಂಡೇಕೊಪ್ಪ ಬಳಿ ನಿಯಂತ್ರಣ ತಪ್ಪಿ ಲಾರಿ ಕಾಲುವೆಗೆ ಬಿದ್ದು ವಾಹನ ಸಂಪೂರ್ಣ ಜಖಂಗೊಂಡಿದೆ. 

ಈ ಮೊಕದ್ದಮೆ ದಾಖಲಿಸಿಕೊಂಡಿರುವ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Similar News