ಉಡುಪಿ: ವೃದ್ಧ ನಾಪತ್ತೆ

Update: 2022-12-30 14:47 GMT

ಉಡುಪಿ:  ಕಾರ್ಕಳ ತಾಲೂಕು ಮುಂಡ್ಕೂರು ಗ್ರಾಮದ ನಿವಾಸಿ ರಮೇಶ ಅಲಿಯಾಸ್ ಕುಟ್ಟಿ ಸಫಲಿಗ (70) ಎಂಬ ವೃದ್ಧರು ಡಿ.27ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 

165 ಸೆ.ಮೀ. ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು, ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ವೃತ್ತ ಕಚೇರಿ ದೂ.ಸಂಖ್ಯೆ: 08258-231083, ಮೊ.ನಂ: 9480805435, ಕಾರ್ಕಳ ಗ್ರಾಮಾಂತರ ಠಾಣೆ ದೂ.ಸಂಖ್ಯೆ: 08258-232083, 233100, ಮೊ.ನಂ; 9480805462ಅನ್ನು ಸಂಪರ್ಕಿಸಬಹುದು ಎಂದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Similar News