ಮೈಸೂರಿನಲ್ಲಿ ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ ಪ್ರಕರಣ: ಚಾಲಕನ ವಿರುದ್ಧ FIR

Update: 2022-12-31 10:06 GMT

ಮೈಸೂರು ಡಿ.31: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್‌ಮೋದಿ ಅವರ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಕಾರು ಚಾಲಕನ ವಿರುದ್ಧ ಮೈಸೂರು ಗ್ರಾಮಾಂತರ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ. 

ಡಿ.27ರಂದು ಪ್ರಹ್ಲಾದ್‌ ಮೋದಿ ಹಾಗೂ ಕುಟುಂಬದ ಮೂವರು ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಮೈಸೂರು ಕಡೆಯಿಂದ ಬಂಡೀಪುರದ ಕಡೆಗೆ ತೆರಳುತ್ತಿದ್ದಾಗ ಕಡಕೋಳದಲ್ಲಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಚಾಲಕ ಸೇರಿದಂತೆ ಐವರು ಗಾಯಗೊಂಡಿದ್ದರು.

ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿ ಚಾಲಕ ಎನ್.ಸತ್ಯನಾರಾಯಣ ವಿರುದ್ಧ ಬೆಂಗಾವಲು ಪಡೆಯ ಸಿಬ್ಬಂದಿ ಎಸ್. ಮಹದೇವ ಪೊಲೀಸ್ ದೂರು ದಾಖಲಿಸಿದ್ದರು.  

ಮಹದೇವ ಅವರ ದೂರಿನನ್ವಯ ಮೈಸೂರು ದಕ್ಷಿಣ ಠಾಣೆಯಲ್ಲಿ ಐಪಿಸಿ ಕಲಂ 279 (ಅತಿಯಾದ ವೇಗ), 337 (ನಿರ್ಲಕ್ಷ್ಯದ ಚಾಲನೆ) ಅಡಿಯಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. 

ಇದನ್ನೂ ಓದಿ: ಮೈಸೂರು: ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Similar News