×
Ad

ಉಡುಪಿ: ಕೆರೆಗೆ ಬಿದ್ದು ವ್ಯಕ್ತಿ ಸಾವು

Update: 2023-01-01 21:16 IST

ಅಜೆಕಾರು: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಹೋಗುವುದಾಗಿ ಮನೆಯಿಂದ ತೆರಳಿದ ವ್ಯಕ್ತಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರ್ಕಳದ ಅಂಡಾರು ಎಂಬಲ್ಲಿ ನಡೆದಿದೆ. 

ಇಲ್ಲಿನ ನಿವಾಸಿ ಉಮೇಶ್ ರಾವ್(45) ಮೃತರು. ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದು ಮೃತಪಟ್ಟ ಬಗ್ಗೆ ಸಂಶಯಿಸಲಾಗಿದೆ.

ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News