ಮಹಾರಾಷ್ಟ್ರ:ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಮೂವರು ಮೃತ್ಯು

Update: 2023-01-01 16:37 GMT

ಮುಂಬೈ,ಜ.1: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ರವಿವಾರ ಸ್ಫೋಟದಿಂದಾಗಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವರು  ಮೃತಪಟ್ಟಿದ್ದು,ಇತರ ಮೂವರು ಗಾಯಗೊಂಡಿದ್ದಾರೆ.

ಬಾರ್ಶಿ ತಾಲೂಕಿನ ಶಿರಾಲಾದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಮಧ್ಯಾಹ್ನ ಮೂರು ಗಂಟೆಯ ಸುಮಾರಿಗೆ ಈ ದುರಂತ ಸಂಭವಿಸಿದೆ.

ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು  ಕೈಗೊಂಡರು ಎಂದು ಅಧಿಕಾರಿಯೋರ್ವರು ತಿಳಿಸಿದರು.

ಬಾರ್ಶಿ ಮುಂಬೈನಿಂದ ಸುಮಾರು 400 ಕಿ.ಮೀ.ದೂರವಿದೆ.

Similar News