ಪತಿ ಜನಾರ್ದನ ರೆಡ್ಡಿ ಪರ ಬಳ್ಳಾರಿಯಲ್ಲಿ ಪತ್ನಿಯಿಂದ ಪ್ರಚಾರ, ಪಕ್ಷದ ಬಾವುಟ ಅನಾವರಣ
Update: 2023-01-02 06:12 GMT
ಬಳ್ಳಾರಿ, ಜ.2: ತಾಲೂಕಿನ ಸಿಂಧವಾಳ ಗ್ರಾಮದಲ್ಲಿ ಪಕ್ಷದ ಧ್ವಜವನ್ನು ಹಾರಿಸುವ ಮೂಲಕ ಜನಾರ್ನರೆಡ್ಡಿ ಅವರ ಪತ್ನಿ ಲಕ್ಷ್ಮೀ ಅರುಣಾ ಅವರು ತಮ್ಮ 'ಕಲ್ಯಾಣ ರಾಜ್ಯ ಪ್ರಗತಿ' ಪಕ್ಷದ ಪ್ರಚಾರಕ್ಕೆ ಜಿಲ್ಲೆಯಲ್ಲಿ ರವಿವಾರ ಚಾಲನೆ ನೀಡಿದ್ದಾರೆ.
ಪಕ್ಷದ ಧ್ವಜ ಬಿಡುಗಡೆ ಮಾಡಿ ನಂತರ ಮಾತನಾಡಿದ ಅವರು, ಇಡೀ ರಾಜ್ಯ ಕಲ್ಯಾಣ ರಾಜ್ಯ ಆಗಬೇಕು. ಅದರಲ್ಲೂ ಬಳ್ಳಾರಿ ಜಿಲ್ಲೆ ವಿಶ್ವದ ಭೂಪಟದಲ್ಲಿ ಎದ್ದು ಕಾಣುವಂತೆ ಅಭಿವೃದ್ಧಿ ಆಗಬೇಕೆಂಬುದು ಜನಾರ್ದನ ರೆಡ್ಡಿ ಅವರ ಗುರಿ, ಅವರ ಜೀವನದ ಜೊತೆ ಹೆಜ್ಜೆ ಹಾಕುವ ನಾನು. ಅವರ ಹೊಸ ಪಕ್ಷದ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತೇನೆ. ಅವರು ಬಳ್ಳಾರಿ ಜಿಲ್ಲೆಗೆ ಬರಲು ಅವಕಾಶ ಇಲ್ಲದ ಕಾರಣ ನಿಮ್ಮ ಗ್ರಾಮಕ್ಕೆ ಬಂದಿರುವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಗಂಗಾವತಿ ದರ್ಗಾ ಅಭಿವೃದ್ಧಿಗೆ 6 ಕೋಟಿ ರೂ. ದೇಣಿಗೆ: ಮಾಜಿ ಸಚಿವ ಜನಾರ್ದನ ರೆಡ್ಡಿ ಭರವಸೆ