ರಾಜಕೀಯದಿಂದ ನಿವೃತ್ತಿ ಪಡೆಯುವ ಚಿಂತನೆಯಲ್ಲಿದ್ದೇನೆ, ಹೈಕಮಾಂಡ್ ಗಮನಕ್ಕೆ ತರುವ ಅವಶ್ಯಕತೆ ಇಲ್ಲ: ಎಸ್.ಎಂ.ಕೃಷ್ಣ

Update: 2023-01-04 11:43 GMT

ಬೆಂಗಳೂರು: 'ರಾಜಕೀಯದಿಂದ ನಿವೃತ್ತಿ ಪಡೆಯುವ ಚಿಂತನೆಯಲ್ಲಿದ್ದೇನೆ' ಎಂದು ಮಾಜಿ ಮುಖ್ಯ ಮಂತ್ರಿ ಎಸ್.ಎಂ.ಕೃಷ್ಣ ಹೇಳಿದ್ದಾರೆ. 

ನಗರದಲ್ಲಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು,  ''ನಮ್ಮ ವಯಸ್ಸಿನ ಬಗ್ಗೆ ನಮಗೆ ಅರಿವಿರಬೇಕು. 90ರಲ್ಲಿ 50 ವರ್ಷದವರ ರೀತಿಯಲ್ಲಿ ನಟನೆ ಮಾಡಲು ಆಗುವುದಿಲ್ಲ. ಸಾರ್ವಜನಿಕ ಜೀವನದಿಂದ ದೂರ ಇರಬೇಕು ಎಂದು ತೀರ್ಮಾನ ಮಾಡಿದ್ದೇನೆ. ಹೀಗಾಗಿಯೇ ನಾನು ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ'' ಎಂದು ವಿವರಣೆ ನೀಡಿದರು. 

''ನಾನೇ ನಿವೃತ್ತಿ ಪಡೆಯುತ್ತಿರುವ ಸಂದರ್ಭದಲ್ಲಿ ಬಿಜೆಪಿ ನನ್ನನ್ನು ಕಡೆಗಣಿಸುವ ಪ್ರಶ್ನೆ ಉದ್ಭವಿಸುವುದಿಲ್ಲ. ನಿವೃತ್ತಿಯನ್ನು ಹೈಕಮಾಂಡ್ ಗಮನಕ್ಕೆ ತರುವ ಅಗತ್ಯವಿಲ್ಲ. ಅವರೇನು ನನಗೆ ಪಿಂಚಿಣಿ ನೀಡುವುದಿಲ್ಲ. ಹೀಗಾಗಿ ಅವರ ಗಮನಕ್ಕೆ ತರುವ ಅಗತ್ಯವಿಲ್ಲ. ವಯಸ್ಸಿನ ಹಿನ್ನೆಲೆಯಲ್ಲಿ ಸಕ್ರಿಯ ರಾಜಕೀಯದಿಂದ ನಿವೃತ್ತಿಪಡೆಯುತ್ತಿದ್ದೇನೆ'' ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿಟ್ವಿಟರ್ ಖಾತೆ ಅಮಾನತುಗೊಂಡಿರುವುದಕ್ಕೆ ಕಾರಣ ತಿಳಿಸಿದ ನಟ ಕಿಶೋರ್ 

Similar News