ಜ.8ಕ್ಕೆ ಬಸವ ವಿಭೂಷಣ ಪ್ರಶಸ್ತಿ ಪ್ರದಾನ
Update: 2023-01-04 12:55 GMT
ಬೆಂಗಳೂರು, ಜ.4: ರಾಷ್ಟ್ರೀಯ ಬಸವ ತತ್ವ ಪರಿಷತ್ ವತಿಯಿಂದ ಬಸವ ವಿಭೂಷಣ ಪ್ರಶಸ್ತಿಯನ್ನು ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ, ಹಿರಿಯ ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೆ. ಉಮೇಶ್ ಹಾಗೂ ಬೆಂಗಳೂರು ವಿವಿಯ ಡಾ.ಸುಮಿತ್ರಾ ಅವರಿಗೆ ಪ್ರದಾನಿಸಲಾಗುತ್ತಿದೆ.
ಬುಧವಾರ ಈ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪರಿಷತ್ತು ಅಧ್ಯಕ್ಷ ಡಿ.ಟಿ.ಅರುಣ್ ಕುಮಾರ್, ಜ.8ರಂದು ಬಸವ ವಿಭೂಷಣ' ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ವಿಜಯನಗರದ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ನಡೆಯಲಿದ್ದು, ನ್ಯಾ.ಸುಭಾಷ್ ಬಿ.ಆಡಿ ಅವರು ಉದ್ಘಾಟಿಸಲಿದ್ದಾರೆ.
ಸಚಿವ ವಿ.ಸೋಮಣ್ಣ, ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ಮುಹಮ್ಮದ್ ರಫೀ ಪಾಶಾ, ನಟಿ ಸಪ್ತಮಿ ಗೌಡ ಸೇರಿದಂತೆ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದರು.