×
Ad

ಹೊಸಪೇಟೆ | ಕಾಂಗ್ರೆಸ್‌ ಸಭೆಯಲ್ಲಿ ಗಲಾಟೆ ಪ್ರಕರಣ: ಹೊಸಪೇಟೆ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಸೇರಿ ಇಬ್ಬರ ಬಂಧನ

Update: 2023-01-05 12:21 IST

ಹೊಸಪೇಟೆ, ಜ.5: ಇತ್ತೀಚೆಗೆ ನಗರದ ಖಾಸಗಿ ಹೊಟೇಲ್ ಒಂದರಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಟಿಕೆಟ್ ಆಕಾಂಕ್ಷಿಗಳ ಸಭೆಯ ವೇಳೆ ಕಾಂಗ್ರೆಸ್ ಪಕ್ಷದ ಇಬ್ಬರು ಮಹಿಳಾ ನಾಯಕಿಯರು ಗಲಾಟೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಪೇಟೆ ಬ್ಲಾಕ್ ಕಾಂಗ್ರೆಸ್‌ನ ಮಹಿಳಾ ಘಟಕದ ಅಧ್ಯಕ್ಷೆ ಯೋಗಲಕ್ಷ್ಮೀ ಸೇರಿ ಇಬ್ಬರನ್ನು ಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜನವರಿ 2ರಂದು ನಗರದ ಖಾಸಗಿ ಹೊಟೇಲ್ ಒಂದರಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ನೇತೃತ್ವದಲ್ಲಿ ನಡೆದ ಆಕಾಂಕ್ಷಿಗಳ ಸಭೆಯ ವೇಳೆ ಇಬ್ಬರು ಮಹಿಳಾ ಕಾರ್ಯಕರ್ತೆಯರ ನಡುವೆ ಗಲಾಟೆ ನಡೆದಿತ್ತೆನ್ನಲಾಗಿದ್ದು, ಸಭೆ ಬಳಿಕ  ತನ್ನ ಮೇಲೆ ಯೋಗಲಕ್ಷ್ಮೀ ಹಾಗೂ ಆತನ ಬೆಂಬಲಿಗ ಸಂದೀಪ್ ಎಂಬವರು ಹಲ್ಲೆ ನಡೆಸಿ, ಜಾತಿನಿಂದನೆ ಮಾಡಿರುವ ಬಗ್ಗೆ ಕಾಂಗ್ರೆಸ್ ಪಕ್ಷದ ಕಲ್ಯಾಣ ಕರ್ನಾಟಕ ಸಂಘಟನಾ ಕಾರ್ಯದರ್ಶಿ ಡಿ.ಶಿಲ್ಪಾ ಎಂಬವರು  ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ  ದೂರು ನೀಡಿದ್ದರು. 

ಶಿಲ್ಪಾ  ಅವರ ದೂರಿನ ಮೇರೆಗೆ ಜ.3ರಂದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿ ಖೆಕೈಗೊಂಡು, ಯೋಗಲಕ್ಷ್ಮೀ ಮತ್ತು ಸಂದೀಪ್ ಎಂಬವರನ್ನು ಬಂಧಿಸಿದ್ದಾರೆ.

ಪ್ರತಿ ದೂರು: ಕಾಂಗ್ರೆಸ್ ಪಕ್ಷದ ಕಲ್ಯಾಣ ಕರ್ನಾಟಕ ಸಂಘಟನಾ ಕಾರ್ಯದರ್ಶಿ ಡಿ.ಶಿಲ್ಪಾ ಹಾಗೂ ಇತರೆ ಇಬ್ಬರ ವಿರುದ್ಧ ಹೊಸಪೇಟೆ ಬ್ಲಾಕ್ ಕಾಂಗ್ರೆಸ್‌ನ ಮಹಿಳಾ ಘಟಕದ ಅಧ್ಯಕ್ಷೆ ಯೋಗಲಕ್ಷ್ಮೀ ಅವರು ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. 

Similar News