ಬಿಜೆಪಿ ‘ಬೂತ್ ಅಭಿಯಾನ’: ಕಾರ್ಯಕರ್ತರ ಮನೆಗಳ ಮೇಲೆ ಧ್ವಜ ಹಾರಿಸಿದ ಅರುಣ್ ಸಿಂಗ್

Update: 2023-01-05 13:04 GMT

ಬೆಂಗಳೂರು, ಜ. 5: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಕ್ಷೇತ್ರದ ನರಸೀಪುರ ಗ್ರಾಮದ ಬೂತ್ ಸಂಖ್ಯೆ-15ರಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ‘ಬೂತ್ ವಿಜಯ ಅಭಿಯಾನ’ದ ಅಂಗವಾಗಿ ಮನೆ ಮೇಲೆ ಪಕ್ಷದ ಧ್ವಜ ಹಾರಿಸಿದರು. 

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ, ಮಾಜಿ ಶಾಸಕ ಎಂ.ವಿ.ನಾಗರಾಜ್, ಜಿಲ್ಲಾಧ್ಯಕ್ಷ ಎ.ವಿ.ನಾರಾಯಣಸ್ವಾಮಿ, ತಾಲೂಕು ಅಧ್ಯಕ್ಷ ಹೇಮಂತ್ ಕುಮಾರ್, ಬೂತ್ ಅಧ್ಯಕ್ಷ ರಾಮಗಿರಿ ಗೌಡ, ಕ್ಷೇತ್ರದ ಹಲವು ನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. 

Similar News