ಕಾವಳಕಟ್ಟೆ: MEIF ವತಿಯಿಂದ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ
ಬಂಟ್ವಾಳ: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ದ.ಕ, ಉಡುಪಿ ಜಿಲ್ಲೆ ವತಿಯಿಂದ ತರಬೇತಿ ಶಿಬಿರಗಳ 3ನೇ ಕಾರ್ಯಾಗಾರವು ಶನಿವಾರ ಕಾವಳಕಟ್ಟೆ ಹಿದಾಯ ಶೇರ್ ಆ್ಯಂಡ್ ಕೇರ್ ಕಾಲನಿ ಸಭಾಂಗಣಲ್ಲಿ ನಡೆಯಿತು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುಧಾಕರ ಕೆ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪಿ .ಜ್ಞಾನೇಶ್ ರವರು ಭಾಗವಹಿಸಿ ಶಿಕ್ಷಣದ ಮಹತ್ವದ ಬಗ್ಗೆ ಮಾತನಾಡಿದರು.
MEIF ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಜೋಕಟ್ಟೆ ಅಧ್ಯಕ್ಷತೆಯನ್ನು ವಹಿಸಿದ್ದರು. MEIF ಪೂರ್ವಾ ಝೋನಲ್ ಉಪಾಧ್ಯಕ್ಷ ಕೆ.ಎಂ. ಮುಸ್ತಾಫ ಸುಳ್ಯ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಾಗಾರದ ಕನ್ವೀನರ್ ಶೇಯ್ಕ್ ರಹ್ಮತುಲ್ಲಾಹ್ ಬರೂಜ್ ಸ್ವಾಗತಿಸಿದರು. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಿ, ಪರೀಕ್ಷೆ ಎದುರಿಸುವ ವಿಧಿ ವಿಧಾನಗಳು ಹಾಗೂ ವಿಶೇಷವಾಗಿ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸರಳ ಕಲಿಕಾ ಕಲೆಗಳ ಬಗ್ಗೆ, ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟ್ರೀಯ ತರಬೇತಿದಾರರಾದ ಪ್ರೊ.ರಾಜೇಂದ್ರ ಭಟ್ ಕಾರ್ಯಾಗಾರ ನೆರವೆರಿಸಿದರು.
ವೇದಿಕೆಯಲ್ಲಿ ಹಿದಾಯ ಫೌಂಡೇಶನ್ ಮಂಗಳೂರು ಇದರ ಅಧ್ಯಕ್ಷ ಜಿ.ಮುಹಮ್ಮದ್ ಹನೀಫ್ , ಜಿಪಂ ಮಾಜಿ ಸದಸ್ಯ ಪದ್ಮಶೇಖರ್ ಜೈನ್, ಬಿ.ಎಂ. ತುಂಬೆ, ಹಿದಾಯ ಶೇರ್ ಆ್ಯಂಡ್ ಕೇರ್ ನ ಇದರ ಆಡಳಿತಾಧಿಕಾರಿ ಆಬಿದ್ ಅಝ್ಗರ್, ಮ್ಯಾನೇಜರ್ ಅಬ್ದುಲ್ ರೌಫ್ ಉಪಸ್ಥಿತರಿದ್ದರು.
ಬುರೂಜ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರಾದ ಶೇಯ್ಕ್ ಜಲಾಲುದ್ದೀನ್ ಅವರು ಸಂಪನ್ಮೂಲ ವ್ಯಕ್ತಿಯ ಕಿರುಪರಿಚಯವನ್ನು ಮಾಡಿದರು. ಅಬ್ದುಲ್ ಹಮೀದ್ ಗೊಳ್ತಮಜಲ್ ಕಾರ್ಯಕ್ರಮವನ್ನು ನಿರೂಪಿಸಿದರು.
ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಕಾಜೂರು, ಉಜಿರೆ, ಗೊಳ್ತಮಜಲ್, ಫರಂಗಿಪೇಟೆ, ಕಕ್ಕಿಂಜೆ, ತುಂಬೆ, ಕೌಡೆಲ್, ರಝಾನಗರ ಪ್ರದೇಶಗಳ 320 ವಿದ್ಯಾರ್ಥಿಗಳು ಮತ್ತು ವಿಷಯ ಶಿಕ್ಷಕರು ಭಾಗವಹಿಸಿದರು. ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಹಿದಾಯ ಫೌಂಡೇಶನ್ ಮಂಗಳೂರು ವಹಿಸಿತ್ತು.