ಗಣರಾಜ್ಯೋತ್ಸವ ಪರೇಡ್ನಲ್ಲಿ ರಾಜ್ಯದ ಸ್ಥಬ್ದಚಿತ್ರಕ್ಕೆ ಅವಕಾಶ ನಿರಾಕರಣೆ: ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ..
ಬೆಂಗಳೂರು: ಈ ವರ್ಷದ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕ ರಾಜ್ಯದ ಸ್ಥಬ್ದಚಿತ್ರಕ್ಕೆ ಕೇಂದ್ರ ಬಿಜೆಪಿ ಸರಕಾರ ಅವಕಾಶ ನಿರಾಕರಿಸಿರುವುದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕಕ್ಕೆ ಮಾಡಿರುವ ಅವಮಾನ. ಕನ್ನಡಿಗರೆಲ್ಲರೂ ಇದನ್ನು ಒಕ್ಕೊರಲಿನಿಂದ ಖಂಡಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಶನಿವಾರ ಈ ಸಂಬಂಧ ಟ್ವೀಟ್ಗಳನ್ನು ಮಾಡಿರುವ ಅವರು, ಸತತ ಹದಿಮೂರು ವರ್ಷಗಳ ಕಾಲ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ಥಬ್ದ ಚಿತ್ರಗಳು ನಮ್ಮ ಇತಿಹಾಸ ಸಂಸ್ಕೃತಿ ಮತ್ತು ಪ್ರಕೃತಿಯ ಹಿರಿಮೆಗಳನ್ನು ಪ್ರದರ್ಶಿಸಿ ಇಡೀ ದೇಶದ ಶ್ಲಾಘನೆಗೆ ಪಾತ್ರವಾಗಿದೆ. ಇದೇ ಮೊದಲ ಬಾರಿ ಕೇಂದ್ರ ಬಿಜೆಪಿ ಸರಕಾರ ಈ ಗೌರವಕ್ಕೆ ಧಕ್ಕೆ ತಂದಿದೆ ಎಂದು ಟೀಕಿಸಿದ್ದಾರೆ.
ಕೇಂದ್ರ ಬಿಜೆಪಿ ಸರಕಾರದ ಎದುರು ಮಾಂಡಲೀಕರಂತೆ ವರ್ತಿಸುತ್ತಿರುವ ಕರ್ನಾಟಕದ ಬಿಜೆಪಿ ನಾಯಕರು ರಾಜ್ಯದ ಘನತೆ-ಗೌರವಗಳನ್ನು ದಿಲ್ಲಿ ನಾಯಕರಿಗೆ ಅಡ ಇಟ್ಟಿರುವುದು ದುರದೃಷ್ಟಕರ. ಮಾತು ಮಾತಿಗೆ ಡಬಲ್ ಎಂಜಿನ್ ಸರಕಾರ ಎಂದು ರಾಜ್ಯದ ಬಿಜೆಪಿ ನಾಯಕರು ಎದೆ ಬಡಿದುಕೊಳ್ಳುತ್ತಿದ್ದಾರೆ. ರಾಜ್ಯದ ಹಕ್ಕು ಮತ್ತು ಗೌರವದ ಪ್ರಶ್ನೆ ಎದುರಾದಾಗ ಮಾತ್ರ ಕರ್ನಾಟಕದ ಎಂಜಿನ್ ಗುಜರಿ ಆಗುತ್ತದೆ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಈ ವರ್ಷದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ಥಬ್ದಚಿತ್ರಕ್ಕೆ @BJP4India ಸರ್ಕಾರ ಅವಕಾಶ ನಿರಾಕರಿಸಿರುವುದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕಕ್ಕೆ ಮಾಡಿರುವ ಅವಮಾನ.
— Siddaramaiah (@siddaramaiah) January 7, 2023
ಕನ್ನಡಿಗರೆಲ್ಲರೂ ಇದನ್ನು ಒಕ್ಕೊರಲಿನಿಂದ ಖಂಡಿಸಬೇಕು. 1/4
ಸತತ ಹದಿಮೂರು ವರ್ಷಗಳ ಕಾಲ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ಥಬ್ದ ಚಿತ್ರಗಳು ನಮ್ಮ ಇತಿಹಾಸ ಸಂಸ್ಕೃತಿ ಮತ್ತು ಪ್ರಕೃತಿಯ ಹಿರಿಮೆಗಳನ್ನು ಪ್ರದರ್ಶಿಸಿ ಇಡೀ ದೇಶದ ಶ್ಲಾಘನೆಗೆ ಪಾತ್ರವಾಗಿದೆ.
— Siddaramaiah (@siddaramaiah) January 7, 2023
ಇದೇ ಮೊದಲ ಬಾರಿ @BJP4India ಈ ಗೌರವಕ್ಕೆ ಧಕ್ಕೆ ತಂದಿದೆ. 2/4
ಕೇಂದ್ರ @BJP4India ಸರ್ಕಾರದ ಎದುರು ಮಾಂಡಲೀಕರಂತೆ ವರ್ತಿಸುತ್ತಿರುವ ಕರ್ನಾಟಕದ @BJP4Karnataka ನಾಯಕರು ರಾಜ್ಯದ ಘನತೆ-ಗೌರವಗಳನ್ನು ದೆಹಲಿ ನಾಯಕರಿಗೆ ಅಡ ಇಟ್ಟಿರುವುದು ದುರದೃಷ್ಟಕರ. 3/4
— Siddaramaiah (@siddaramaiah) January 7, 2023
ಮಾತು ಮಾತಿಗೆ ಡಬಲ್ ಎಂಜಿನ್ ಸರ್ಕಾರ ಎಂದು ರಾಜ್ಯದ @BJP4Karnataka ನಾಯಕರು ಎದೆ ಬಡಿದುಕೊಳ್ಳುತ್ತಿದ್ದಾರೆ.
— Siddaramaiah (@siddaramaiah) January 7, 2023
ರಾಜ್ಯದ ಹಕ್ಕು ಮತ್ತು ಗೌರವದ ಪ್ರಶ್ನೆ ಎದುರಾದಾಗ ಮಾತ್ರ ಕರ್ನಾಟಕದ ಎಂಜಿನ್ ಗುಜರಿ ಆಗುತ್ತದೆ. 4/4