ಮಂಡ್ಯ: ಎತ್ತಿನಗಾಡಿಯ ಚಕ್ರಕ್ಕೆ ಸಿಲುಕಿ ರೈತ ಸ್ಥಳದಲ್ಲೇ ಮೃತ್ಯು

ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಯ ವೇಳೆ ಘಟನೆ

Update: 2023-01-08 15:41 GMT

ಮಂಡ್ಯ: ಎತ್ತಿನ ಗಾಡಿ ಓಟದ ಸ್ಪರ್ಧೆ ವೇಳೆ ಚಕ್ರಕ್ಕೆ ಸಿಲುಕಿ ರೈತನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. 

ಕೀಳಾರ ಗ್ರಾಮದ ನಾಗರಾಜು (42) ಮೃತ ರೈತ ಎಂದು ತಿಳಿದು ಬಂದಿದೆ.

ಮಂಡ್ಯ ತಾಲೂಕಿನ ಚಿಕ್ಕಮಂಡ್ಯದಲ್ಲಿ ಎತ್ತಿನ ಗಾಡಿ ಓಟದ ಸ್ಪರ್ಧೆ ವೀಕ್ಷಿಸುತ್ತಿದ್ದವರ ಮೇಲೆ ಗಾಡಿ ಹರಿದು ಅವಘಡ ಸಂಭವಿಸಿದೆ ಎನ್ನಲಾಗಿದೆ. 

ಕಳೆದ ಎರಡು ದಿನಗಳಿಂದ ಇಲ್ಲಿ ಎತ್ತಿನ ಗಾಡಿ ಓಟದ ಸ್ಪರ್ಧೆ ನಡೆಯುತ್ತಿತ್ತು. ಘಟನೆಯಲ್ಲಿ ಬಾಲಕ ಗಾಯಗೊಂಡಿದ್ದು, ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Similar News