ಬೆಂಗಳೂರು: ಕೋಲಾರಕ್ಕೆ ತೆರಳುವ ಮುನ್ನ ಕೆಎಚ್‌ ಮುನಿಯಪ್ಪ ಭೇಟಿಯಾಗಿ ಕುತೂಹಲ ಮೂಡಿಸಿದ ಸಿದ್ದರಾಮಯ್ಯ

Update: 2023-01-09 08:03 GMT

ಕೋಲಾರ, ಜ.9:  ಇಂದು ಕೋಲಾರದಲ್ಲಿ ಸಮಾವೇಶ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಅವರ ಬೆಂಗಳೂರಿನ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. 

ಕೋಲಾರದ ಮಿನಿ ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಿದ್ದು, ಸುಮಾರು 5 ಸಾವಿರ ಜನ ಕಾಂಗ್ರೆಸ್‌ ಕಾರ್ಯಕರ್ತರು ಭಾಗವಹಿಸಲಿದ್ದು,  ಕೋಲಾರದ ರಮೇಶ್ ಕುಮಾರ್ ಬಣ ಮುಂಚೂಣಿಯಲ್ಲಿ ನಡೆಯುತ್ತಿರುವ ಹಿನ್ನೆಲೆ ಮುನಿಸಿಕೊಂಡಿದ್ದ ಕೆ.ಹೆಚ್.ಮುನಿಯಪ್ಪ ಗುಂಪನ್ನು ಸಮಾಧಾನ ಪಡಿಸಲು ಕೆ.ಹೆಚ್.ಮುನಿಯಪ್ಪ ಅವರ ಮನೆಗೆ ತೆರಳಿ ಮಾತುಕತೆ ನಡೆಸಿದ್ದಾರೆನ್ನಲಾಗಿದೆ. 

ಇಂದು ನಡೆಯುವ ಸಭೆಯಲ್ಲಿ ಕೋಲಾರದಿಂದ ತಮ್ಮ ಸ್ಪರ್ಧೆಯನ್ನು ಘೋಷಣೆ ಮಾಡಲಿದ್ದಾರೆ ಎಂದೂ ಹೇಳಲಾಗುತ್ತಿದೆ. 

ಈ ಕಾರ್ಯಕ್ರಮದಲ್ಲಿ  ಮಾಜಿ ಸಚಿವ ಎಂ.ಆರ್. ಸೀತಾರಾಂ, ಮಾಜಿ ಸಂಸದ ಚಂದ್ರಪ್ಪ, ಮಾಜಿ ಶಾಸಕ ನಾರಾಯಣ ಸ್ವಾಮಿ, ಕೋಲಾರ ವಿಧಾನಸಭೆ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸಾದ್ ಬಾಬು, ಉದಯಶಂಕರ್ ಹಾಜರಿದ್ದರು.

Similar News