ಫೆ.12ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ; ಪ್ರಧಾನಿ ಮೋದಿ ಭಾಗಿ: ಸಂಸದ ಬಿ.ವೈ. ರಾಘವೇಂದ್ರ

Update: 2023-01-09 12:50 GMT

ಶಿವಮೊಗ್ಗ, ಜ.9: ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣವನ್ನು ಫೆಬ್ರವರಿ 12ಕ್ಕೆ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ. 

ನಗರದ ನವಲೆ, ಕೃಷಿ ಕಾಲೇಜು ಎದುರು ಚನ್ನಮುಂಬಾಪುರದಲ್ಲಿ ಜಿಲ್ಲಾ ಜಂಗಮ ಸಮಾಜದಿಂದ ನಿರ್ಮಿಸಲಾಗುತ್ತಿರುವ ಜಂಗಮ ಸಮಾಜದ ಸಾಂಸ್ಕೃತಿಕ ಭವನ ಶಿಲಾನ್ಯಾಸ ಹಾಗೂ ಭೂಮಿಪೂಜೆ ಸಮಾರಂಭವನ್ನು  ರವಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಕಾಮಗಾರಿ ಮುಗಿಯುವ ಹಂತದಲ್ಲಿದೆ. ವಿಮಾನ ಹಾರಾಟಕ್ಕೆ ಎಲ್ಲಾ ರೀತಿಯ ಯೋಜನೆ ರೂಪಿಸಲಾಗಿದೆ.  ಮುಂದಿನ ದಿನದಲ್ಲಿ ಈ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದರು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಮಹಾನಗರ ಪಾಲಿಕೆ ಸದಸ್ಯ ಎಚ್.ಸಿ. ಯೋಗೇಶ್, ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್. ಜ್ಯೋತಿ ಪ್ರಕಾಶ್, ಜಂಗಮ ಸಮಾಜ ಅಧ್ಯಕ್ಷ ಎ.ಎಂ. ಚಂದ್ರಯ್ಯ, ಟಿ.ವಿ. ಈಶ್ವರಯ್ಯ, ಎಚ್.ಎಲ್. ಲಿಂಗರಾಜ್, ಎಚ್. ಮಲ್ಲಿಕಾರ್ಜುನ ಸ್ವಾಮಿ, ಪಾರ್ವತಮ್ಮ ಸಿ.ಎಂ. ಪಂಚಾಕ್ಷರಯ್ಯ, ಎಸ್. ಅಡವೀಶಯ್ಯ, ಜಿ.ಎಸ್. ಹೀರೆಮಠ, ಪುಟ್ಟಸ್ವಾಮಿ, ಸುಜಯ್ ಪ್ರಸಾದ್ ಇದ್ದರು.

Similar News