ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವು ಪ್ರಕರಣ; BMRCLನ ಮುಖ್ಯ ಇಂಜಿನಿಯರ್ ಅಮಾನತಿಗೆ ಸಿಎಂ ಆದೇಶ

Update: 2023-01-10 16:32 GMT

ಮೆಟ್ರೋ ಪಿಲ್ಲರ್ ಬಿದ್ದು ತಾಯಿ-ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಆರ್​ಸಿಎಲ್​ನ ಮುಖ್ಯ ಇಂಜಿನಿಯರ್​ ಸೇರಿದಂತೆ ಎಲ್ಲ ಇಂಜಿನಿಯರ್​ಗಳನ್ನು ಅಮಾನತು ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ,  ' ಹಿರಿಯ ಅಧಿಕಾರಿಗಳಿಗೆ ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಳ್ಳವಂತೆ ಹೇಳಿದ್ದೇನೆ. ಜೊತೆಗೆ ಸಸ್ಪೆಂಡ್ ಮಾಡುವುದಕ್ಕೆ ಹೇಳಿದ್ದೇನೆ. ಕಾಂಟ್ರಾಕ್ಟರ್ ಕಂಪನಿಯವರ ವಿರುದ್ಧವೂ  ಕೇಸ್ ದಾಖಲಿಸುವುದಕ್ಕೆ ಸೂಚಿಸಿದ್ದೇನೆ' ಎಂದು ಮಾಹಿತಿ ನೀಡಿದರು.

''ತನಿಖೆಯನ್ನ ಯಾವ ರೀತಿಯಾಗಿ ಮಾಡ್ಬೇಕು ಎನ್ನುವುದನ್ನ ನಾಳೆ ತೀರ್ಮಾನ ಮಾಡುತ್ತೇವೆ. ಸದ್ಯ ಮೆಟ್ರೋ ಕಡೆಯಿಂದ 20 ಲಕ್ಷ ಪರಿಹಾರ ಕೊಡುತ್ತಿದ್ದಾರೆ. ನನ್ನ ಕಡೆಯಿಂದ 10 ಲಕ್ಷ ಪರಿಹಾರ ಘೋಷಿಸಿದ್ದೇನೆ. ಆದರೆ ಇಲ್ಲಿ ಪರಿಹಾರ ಮುಖ್ಯವಾಗುವುದಿಲ್ಲ, ಈ ಘಟನೆಗೆ ಕಾರಣ ಯಾರು? ಸಮಸ್ಯೆ ಏನಾಗಿತ್ತು ಎನ್ನುವುದನ್ನ ಪತ್ತೆ ಹಚ್ಚಿ ಕ್ರಮ ತೆಗೆದುಕೊಳ್ಳಬೇಕು. ಕೂಡಲೆ ತನಿಖೆಗೆ ಸೂಚಿಸಿದ್ದು, ಈ ರೀತಿಯ ಘಟನೆಗಳು ಮತ್ತೆ  ನಡೆಯದಂತೆ ಸೂಚಿಸಿದ್ದೇನೆ' ಎಂದು ತಿಳಿಸಿದರು. 

Similar News