ವಿಟ್ಲ: ಜ.14,15ರಂದು ಕ್ಯಾನ್ಸರ್ ಪೀಡಿತ ಸಹಾಯಾರ್ಥವಾಗಿ ಕ್ರಿಕೆಟ್ ಪಂದ್ಯಾಟ

Update: 2023-01-11 11:16 GMT

ವಿಟ್ಲ: ಕ್ಯಾನ್ಸರ್ ನಿಂದ ಅನಾರೋಗ್ಯಕ್ಕೆ ತುತ್ತಾದ ಮೂವರಿಗೆ ಹಾಗೂ ವಿಶೇಷ ಕಾಯಿಲೆಯಿಂದ ಬಳಲುತ್ತಿರುವ ಇಬ್ಬರು ಮಕ್ಕಳ ಸಹಾಯಾರ್ಥ ಜ.14 ಹಾಗೂ ಜ.15ರಂದು ಜೈ ಭೀಮ್ ಟ್ರೋಫ್ 2023 ವಿಟ್ಲ ಸರ್ಕಾರಿ ಮಾದರಿ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ದ. ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ. ಕೆ. ಸೇಸಪ್ಪ ಬೆದ್ರಕಾಡು ಹೇಳಿದರು.

ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿ. ಕೆ. ಸೇಸಪ್ಪ ಬೆದ್ರಕಾಡು, ಜ.14ರಂದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ 11 ಜನರ ಕ್ರಿಕೆಟ್ ನಡೆಯಲಿದ್ದು, ಜ.15ರಂದು ಎಲ್ಲರಿಗೂ ಮುಕ್ತ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ವಿಠಲ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ಮಾಡಲಿದ್ದು, ಅಧ್ಯಕ್ಷತೆಯನ್ನು ಸಮಿತಿಯ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಯು. ವಿಟ್ಲ ವಹಿಸಲಿದ್ದಾರೆ ಎಂದು ತಿಳಿಸಿದರು.

ಜ.15ರಂದು ಸಮಾರೋಪ ಸಮಾರಂಭದಲ್ಲಿ ದಿವ್ಯಪ್ರಭಾ ಚಿಲ್ತಡ್ಕ, ಅಶೋಕ್ ಕುಮಾರ್ ರೈ, ಪೆÇಲೀಸ್ ನಿರೀಕ್ಷಕ ಎಚ್. ಇ. ನಾಗರಾಜ್, ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಮೆಸ್ಕಾಂ ಶಾಖಾಧಿಕಾರಿ ಆನಂದ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಜಿಲ್ಲಾಧ್ಯಕ್ಷ ಚಂದ್ರಶೇಖರ್ ಯು., ಯಾದವ ಏಮಾಜೆ ಉಪಸ್ಥಿತರಿದ್ದರು.

Similar News