ರಾಷ್ಟ್ರೀಯ ಯುವ ಜನೋತ್ಸವ | ನಾಳೆ ಹುಬ್ಬಳ್ಳಿಗೆ ಪ್ರಧಾನಿ ಮೋದಿ ಭೇಟಿ; ನಗರದ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

Update: 2023-01-11 13:01 GMT

ಹುಬ್ಬಳ್ಳಿ: ನಾಳೆ (ಜನವರಿ 12 ) ನಡೆಯಲಿರುವ ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬರುತ್ತಿರುವ ಹಿನ್ನೆಲೆಯಲ್ಲಿ, ನಗರದಲ್ಲಿನ ಎಲ್ಲ ಶಾಲಾ ಕಾಲೇಜುಗಳಿಗೆ ರಜಾ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ' ಪ್ರಧಾನಿ ಮೋದಿಯವರು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ನಂತರ ರಸ್ತೆ ಮೂಲಕ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ 50 ಸಾವಿರಕ್ಕೂ ಹೆಚ್ಚು ಯುವಕರು, ಯುವತಿಯರು ಭಾಗವಹಿಸುವ ನಿರೀಕ್ಷೆ ಇದೆ' ಎಂದು ತಿಳಿಸಿದರು.

'ಈಗಾಗಲೇ ನೋಂದಣಿ ಮಾಡಿಕೊಂಡಿದ್ದಾರೆ. ಈಗಾಗಲೇ ಬಸ್‌ಗಳಿಗೆ ಬೇರೆ ಮಾರ್ಗವನ್ನು ಸೂಚಿಸಿದೆ. ಇಲ್ಲಿ ಎಲ್ಲರಿಗೂ ಅವಕಾಶ ನೀಡಲಿದೆ. ರಾಜ್ಯ ಮತ್ತು ಅಂತರಾಜ್ಯದಿಂದ ಬರುತ್ತಿದ್ದಾರೆ. ಅವರಿಗೆಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ' ಎಂದರು.

Similar News