ಉಡುಪಿ: ಅಡಿಕೆ ಮರದಿಂದ ಬಿದ್ದು ಮೃತ್ಯು
Update: 2023-01-11 21:07 IST
ಶಂಕರನಾರಾಯಣ: ಅಡಿಕೆ ಕೊಯ್ಯಲು ಬೇರೆಯವರ ತೋಟಕ್ಕೆ ಹೋದ ವ್ಯಕ್ತಿ ಅಡಿಕೆಮರದಿಂದ ಅಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಸಿದ್ದಾಪುರ ಗ್ರಾಮದ ಚೀನಾಬೇರು ಎಂಬಲ್ಲಿ ನಡೆದಿದೆ.
ಯಡಮೊಗೆ ನಿವಾಸಿ ಬಾಬು ನಾಯ್ಕ (60) ಮೃತ ದುರ್ದೈವಿ. ಅಡಿಕೆ ಮರದಿಂದ ಅಡಿಕೆ ಕೊಯ್ಯುತ್ತಿರುವಾಗ ಅಕಸ್ಮಾತ್ ಬಿದ್ದರು. ಈ ಹಿನ್ನೆಲೆಯಲ್ಲಿ ಗಂಭೀರ ಗಾಯಗೊಂಡ ಬಾಬು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಿದ್ದಾಪುರದ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಆ ಬಳಿಕ ಅಲ್ಲಿಂದ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ಹೋಗುವ ದಾರಿ ಮದ್ಯೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.