ಬಾಗಲಕೋಟೆ: ಮೂವರು ಹೆಣ್ಣು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

Update: 2023-01-11 18:14 GMT

ಬಾಗಲಕೋಟೆ, ಜ.11: ಮೂರು ಹೆಣ್ಣು ಮಕ್ಕಳಿಗೆ ವಿಷವುಣಿಸಿ ನಂತರ ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಬುಧವಾರ ವರದಿಯಾಗಿದೆ.

ಗ್ರಾಮದ ರೇಖಾ ಅರ್ಜುನ್ ಬಂಗಾರಿ (28), ಮಕ್ಕಳಾದ ಸನ್ನಿಧಿ (7), ಸಮೃದ್ಧಿ (5), ಶ್ರೀನಿಧಿ (2) ಮೃತರು ಎಂದು ತಿಳಿದು ಬಂದಿದೆ.

ಮಾನಸಿಕವಾಗಿ ಬಳಲುತ್ತಿದ್ದರೆನ್ನಲಾದ ರೇಖಾ ಈ ಹಿಂದೆಯೂ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಹೇಳಲಾಗಿದೆ. ಬುಧವಾರ ಬೆಳಿಗ್ಗೆ  ಬಹಳ ಹೊತ್ತಿನಿಂದ ಮನೆಯ ಬಾಗಿಲು ತೆರೆಯದ್ದರಿಂದ ಪಕ್ಕದ ಮನೆಯವರು ಕಿಟಕಿ ಮೂಲಕ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದಿದೆ.

ಪಕ್ಕದ ಮನೆಯವರು ಮನೆ ಬಾಗಿಲು ಮುರಿದು ಒಳಗೆ ಹೋದಾಗ  2ವರ್ಷ್ ಮಗು ಶ್ರೀನಿಧಿ ಮಾತ್ರ ಬದುಕಿದ್ದಳು. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸಿದೆ ಮೃತಳಾಗಿದ್ದಾಳೆ ಎನ್ನಲಾಗಿದೆ. 

ಈ ಸಂಬಂಧ ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಾಸನ | ಇಬ್ಬರು ಮಕ್ಕಳಿಗೆ ಇಲಿ ಪಾಷಾಣ ನೀಡಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ: ಮಗು ಮೃತ್ಯು

Similar News