×
Ad

ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಗೃಹಸಚಿವರೇ ನಂಬರ್ 1 ಆರೋಪಿ: ಕಿಮ್ಮನೆ ರತ್ನಾಕರ್

Update: 2023-01-12 18:50 IST

ಶಿವಮೊಗ್ಗ (ಜ.12): ತೀರ್ಥಹಳ್ಳಿಯಲ್ಲಿ ನಡೆದ ಈಡಿ ದಾಳಿಯನ್ನೂ ಬಿಜೆಪಿ ರಾಜಕೀಯ ಪ್ರೇರಿತವಾಗಿ ಬಿಂಬಿಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೀರ್ಥಹಳ್ಳಿಯಲ್ಲಿ ನಡೆದ ಘಟನೆ ಕೆಲವು ಮಾಧ್ಯಮಗಳಲ್ಲಿ ಸ್ವಯಂ ಘೋಷಿತ ಹೇಳಿಕೆ ಆಗಿದೆ. ತೀರ್ಥಹಳ್ಳಿಗೆ ಬುಧವಾರ  ಈಡಿ ಬಂದಿದ್ದರು. ಕಚೇರಿಗೆ ಬಂದು ಕರೆಮಾಡಿದ್ದರು. 2015 ರಲ್ಲಿ 10 ಲಕ್ಷ ರೂ. ಹಣವನ್ನು  ಕಟ್ಟಡದ ಅಡ್ವಾನ್ಸ್ ನೀಡಲಾಗಿದೆ. ಇದನ್ನ  ರಾಜಕೀಯವಾಗಿ ಈಡಿ ದಾಳಿ ಎಂದು ಬಣ್ಣಿಸಲಾಗುತ್ತಿದೆ ಎಂದರು.

10 ವರ್ಷ ಶಾಸಕನಾಗಿದ್ದೇನೆ. ಇದರಿಂದ ಹೆದರುವುದಿಲ್ಲ. ರಾಜಕೀಯಕ್ಕೆ ಬಂದಿದ್ದು ಸಮಾಜ ಸೇವೆಗಾಗಿ. ಇದನ್ನ ಸವಾಲಾಗಿ ಸ್ವೀಕರಿಸುವುದಾದರೆ ಸವಾಲಾಗಿ ಸ್ವೀಕರಿಸುವೆ. ಆರಗ ಜ್ಞಾನೇಂದ್ರರವರಿಗೆ ಈ ಬಗ್ಗೆ ಸವಾಲು ಎಸೆಯುವೆ. ಅಮಿತ್ ಶಾ ಮತ್ತು ಜ್ಞಾನೇಂದ್ರ ಇಬ್ಬರೂ  ನನ್ನ ವಿರುದ್ಧ ಈ ವಿಚಾರದಲ್ಲಿ ಸಿಬಿಐ ತನಿಖೆ ನಡೆಸಲಿ ಎಂದು ಸವಾಲು ಹಾಕಿದರು.

ಗೃಹಸಚಿವರೇ  ನಂಬರ್ ಒನ್ ಆರೋಪಿ:

ಸ್ಯಾಂಟ್ರೋ ರವಿ ವಿಚಾರದಲ್ಲಿ ಫೆಬ್ರವರಿ ಒಳಗೆ ಗೃಹ ಸಚಿವ ಸ್ಥಾನಕ್ಕೆ  ಆರಗ ಜ್ಞಾನೇಂದ್ರ ರಾಜೀನಾಮೆ ನೀಡದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಯಾವ ಅಧಿಕಾರಿಯನ್ನ ಎಲ್ಲಿ ಹಾಕಬೇಕು ಎಂದು ಸ್ಯಾಂಟ್ರೋ ರವಿ ಬಳಿ ಪಟ್ಟಿ ಇತ್ತು. ಅದರಂತೆ ವರ್ಗಾವಣೆ ಆಗಿದೆ. ಈ ವಿಚಾರದಲ್ಲಿ ಆರಗನನ್ನು ಅರೆಸ್ಟ್ ಮಾಡಬೇಕು ಪಿಎಸ್‌ಐ ಮತ್ತು ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಗೃಹಸಚಿವರೇ ನಂಬರ್1ಆರೋಪಿ  ಎಂದು ವಿವರಿಸಿದರು.

ಅಡಿಕೆಯ ಟಾಸ್ಕ್ ಫೋರ್ಸ್ ಅಧ್ಯಕ್ಷರಾಗಿ ಪರ್ಯಾಯ ಬೆಳೆ ಬೆಳೆಯಲು ಅಧಿವೇಶನದಲ್ಲಿ ತಿಳಿಸಿದ್ದಾರೆ. ಈ ದೇಶದಲ್ಲಿ ಮೊದಲನೇ ಉಗ್ರ ಯಾರು ಎಂದರೆ ನಾಥುರಾಮ್ ಗೋಡ್ಸೆ. ಆತ ಕೊಂದಿರುವುದು ಸತ್ಯವನ್ನ, ಅಹಿಂಸೆಯನ್ನ, ಇವೆಲ್ಲದಕ್ಕೂ ಹೋರಾಟ ಮಾಡಲಾಗುವುದು ಎಂದರು.

ತೀರ್ಥಹಳ್ಳಿ -ಹೊಸನಗರ ಗಳಲ್ಲಿನ ಪಿಡಬ್ಲ್ಯೂಡಿ ಕಾಮಗಾರಿಗಳೆಲ್ಲವನ್ನು ಗೃಹಸಚಿವರು ಅವರ ಸಂಬಂಧಿ ಸಿ.ವಿ.ಚಂದ್ರಶೇಖರ್ ಅವರಿಗೆ ನೀಡಿದ್ದಾರೆ. ಶೇ.50ರಷ್ಟು ಪಾಲುದಾರಿಕೆಯೂ ಇದೆ. ಸರ್ಕಾರಿ ಭೂಮಿಯನ್ನು ಖಾಸಗಿ ಭೂಮಿಯಾಗಿ ದಾಖಲೆ ಮಾಡಿಸಿ ಲೇಔಟ್‌ಗಳನ್ನು ಮಾಡುತ್ತಿದ್ದು. ಮಗನೇ ಇದಕ್ಕೆ ಬಂಡವಾಳ ಹೂಡಿದ್ದಾನೆ. ಮಗನ ಲೇಔಟ್‌ಗೆ ಸರ್ಕಾರಿ ದುಡ್ಡಿನಲ್ಲಿ ಕಾಂಕ್ರೀಟ್ ರಸ್ತೆಯಾಗುತ್ತದೆ ಎಂದು ಗಂಭೀರ ಆರೋಪ ಮಾಡಿದ ಕಿಮ್ಮನೆ ರತ್ನಾಕರ್, ಮುಖ್ಯಮಂತ್ರಿಗಳು ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕೈಬಿಡದಿದ್ದರೆ ಫೆಬ್ರವರಿಯಲ್ಲಿ ಎಲ್ಲಾ ದಾಖಲೆಗಳನ್ನು ಬಿಡುಗಡೆ ಮಾಡಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬಿಜೆಪಿ ಒಂದು ಕೆಟ್ಟ ಸಿದ್ಧಾಂತ. ದೇಶದ ಜನರನ್ನು ಮಂಗ ಮಾಡುತ್ತಿದೆ. ಅಲ್ಪಸಂಖ್ಯಾತರೇ ಬಿಜೆಪಿಗೆ ಆಕ್ಸಿಜೆನ್. ಅಲ್ಪಸಂಖ್ಯಾತರನ್ನು ಹೊರತುಪಡಿಸಿ ಬಿಜೆಪಿ ಮಾಡಿದ ಯಾವುದಾದರೂ ಭಾಷಣವಿದೆಯಾ? ಜನರಿಗೆ ಇಂದಿರಾ ಆವಾಸ್ ಯೋಜನೆಯ ಬಿಲ್, ಬಿಪಿಎಲ್ ಕಾರ್ಡು, ಅಕ್ಕಿ, ಬೇಳೆ, ಎಣ್ಣೆ ಕೊಡಲಾಗುತ್ತಿಲ್ಲ ಬಿಜೆಪಿ ಸರ್ಕಾರಕ್ಕೆ ಬಿಜೆಪಿ ಸರ್ಕಾರದಲ್ಲಿ ಗುತ್ತಿಗೆದಾರರು ನೇಣು ಹಾಕಿಕೊಳ್ಳುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ   ಮಾಜಿ ವಿಧಾನ ಪರಿಷತ್ ಸದಸ್ಯ ಆರ್ ಪ್ರಸನ್ನ ಕುಮಾರ್ , ಎನ್ ರಮೇಶ್, ಸಂತೇಕಡೂರ ವಿಜಯ್(ಧನಿ), ಪಾಲಿಕೆ ಸದಸ್ಯ ರಮೇಶ್, ಮುಖಂಡರಾದ ಜಿ.ಡಿ ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.

Similar News