ಸುಳ್ಯ | ದೇವರಕೊಲ್ಲಿ ಬಳಿ ಕಾರಿಗೆ ಢಿಕ್ಕಿ ಹೊಡೆದ ವ್ಯಾನ್: 10 ಮಂದಿಗೆ ಗಾಯ

Update: 2023-01-12 14:36 GMT

ಸುಳ್ಯ, ಜ.12: ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ವ್ಯಾನ್ ಒಂದು ಸಂಪಾಜೆಯ ದೇವರಕೊಲ್ಲಿ ಸಮೀಪ ಎದುರಿನಿಂದ ಬರುತ್ತಿದ್ದ ಕಾರೊಂದಕ್ಕೆ ಢಿಕ್ಕಿ ಹೊಡೆದಿದ್ದು, 4 ಮಕ್ಕಳು ಸೇರಿ 10 ಮಂದಿ ಗಾಯಗೊಂಡ ಘಟನೆ ಗುರುವಾರ ಸಂಜೆ ವರದಿಯಾಗಿದೆ.

ಕೊಡಗಿನ ಎಮ್ಮೆಮಾಡು ಸಮೀಪದ ಪುಣ್ಯ ಸ್ಥಳಕ್ಕೆ ಹೋಗಿ ಬರುತ್ತಿದ್ದ ಬದಿಯಡ್ಕ ಮತ್ತು ಮಂಗಳೂರಿನ ಜನರಿದ್ದ ವ್ಯಾನ್ ಸಂಪಾಜೆ ಸಮೀಪದ ದೇವರಕೊಲ್ಲಿ ಬಳಿ ಎದುರಿನಿಂದ ಬರುತ್ತಿದ್ದ ಸ್ಕಾರ್ಪಿಯೋ ವಾಹನಕ್ಕೆ ಢಿಕ್ಕಿ ಹೊಡೆದಿದೆ.  ಅಪಘಾತದಿಂದ ಬಸ್ಸಿನಲ್ಲಿದ್ದ 4 ಮಕ್ಕಳು ಸೇರಿ 10 ಮಂದಿಗೆ ಸಣ್ಣ ಪುಟ್ಟಗಾಯಗಳಾಗಿವೆ. ಇದರಲ್ಲಿ ಓರ್ವ ಮಹಿಳೆಗೆ ಹೆಚ್ಚಿನ ಪ್ರಮಾಣದ ಗಾಯಗಳಾಗಿದ್ದು, ಎಲ್ಲಾರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. 

ಗಾಯಾಳುಗಳನ್ನು ಸಾರ್ವಜನಿಕರ ಸಹಾಯದಿಂದ ಸುಳ್ಯ ನಗರದ ಕೆವಿಜಿ ಆಸ್ಪತ್ರೆ ಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. 

Similar News