ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣ: ನಾಲ್ವರ ವಿಚಾರಣೆ
Update: 2023-01-12 16:43 GMT
ಬೆಂಗಳೂರು, ಜ. 12: ಉದ್ಯಮಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ಕಗ್ಗಲಿಪುರ ಠಾಣಾ ಪೊಲೀಸರು ಇದುವರೆಗೂ ನಾಲ್ವರನ್ನು ವಿಚಾರಣೆ ನಡೆಸಿದ್ದಾರೆ.
ನಾಲ್ವರನ್ನು ವಿಚಾರಣೆ ನಡೆಸಿದಾಗ ಪ್ರದೀಪ್ಗೆ ಎಲ್ಲೂ ವಂಚನೆ ಮಾಡಿರುವುದು ಕಂಡುಬಂದಿಲ್ಲ ಆತ್ಮಹತ್ಯೆಗೆ ಪ್ರಚೋದನೆ ನೀಡುವ ಅಂಶ ಕೂಡ ತನಿಖೆಯಿಂದ ಕಂಡುಬಂದಿಲ್ಲ. ಪ್ರಕರಣದಲ್ಲಿ ಹೆಸರು ಕೇಳಿಬಂದಿರುವ ಹಿನ್ನಲೆಯಲ್ಲಿ ಶಾಸಕ ಅರವಿಂದ ಲಿಂಬಾವಳಿ ಅವರಿಂದ ಹೇಳಿಕೆ ಪಡೆಯಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಈಗಾಗಲೇ ನಾಲ್ವರು ಆರೋಪಿಗಳ ವಿಚಾರಣೆ ಮಾಡಲಾಗಿದೆ. ಗೋಪಿ ಎಂಬ ಆರೋಪಿಯ ವಿಚಾರಣೆ ಬಾಕಿ ಇದೆ ಎಂದ ಅವರು, ಆತ ತಲೆಮರೆಸಿಕೊಂಡಿದ್ದು, ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಹೇಳಿದರು.