ಹಿಂದೂ ಮಹಿಳೆಯರ ರಕ್ಷಣೆಗಾಗಿ ಮನೆಗಳಲ್ಲಿ ತಲ್ವಾರ್ ಇಟ್ಟುಕೊಳ್ಳಿ: ಪ್ರಮೋದ್ ಮುತಾಲಿಕ್

Update: 2023-01-13 05:14 GMT

ಕಲಬುರಗಿ: ‘ಹಿಂದೂ ಮಹಿಳೆಯರ ರಕ್ಷಣೆಗಾಗಿ ನಿಮ್ಮ ಮನೆಗಳಲ್ಲಿ ಎಲ್ಲರಿಗೂ ಕಾಣಿಸುವ ಸ್ಥಳದಲ್ಲಿ ತಲ್ವಾರ್ ಇಟ್ಟುಕೊಳ್ಳಿ’ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿವಾದಾತ್ಮ ಹೇಳಿಕೆ ನೀಡಿದ್ದಾರೆ. 

ಯಡ್ರಾಮಿಯಲ್ಲಿ ನಿನ್ನೆ (ಜ.12) ರಂದು ನಡೆದ ಹಿಂದೂ ಸಂತ ಸಮಾವೇಶದಲ್ಲಿ ಮಾತನಾಡಿದ ಅವರು,  ಹಿಂದೂಗಳು ಮನೆಯಲ್ಲಿ ಕಾಣುವ ರೀತಿಯಲ್ಲೇ ತಲ್ವಾರ್ ಇಡಬೇಕು ಎಂದು ಹೇಳಿದ್ದಾರೆ. 

''ಮೊದಲು ನಾವೆಲ್ಲರೂ ಆಯುಧಗಳನ್ನು ಪೂಜೆ ಮಾಡುತ್ತಿದ್ದೆವು. ಇದೀಗ ಪುಸ್ತಕ, ಪೆನ್ನು, ವಾಹನಗಳನ್ನು ಪೂಜೆ ಮಾಡುತ್ತಿದ್ದೇವೆ. ಪೊಲೀಸರು, ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ಗೆ ಪೂಜೆ ಮಾಡಲ್ಲ. ಪೊಲೀಸ್ ಠಾಣೆಯಲ್ಲಿ ಪೊಲೀಸರು ಬಂದೂಕಿಗೆ ಪೂಜೆ ಮಾಡಲ್ವಾ? ಹೀಗಾಗಿ ಇನ್ನುಮುಂದೆ ತಲ್ವಾರ್, ಚಾಕು, ಕೊಡಲಿ ಇಟ್ಟು ಪೂಜೆ ಮಾಡಬೇಕು. ಮನೆಯಲ್ಲಿ ಒಂದು ತಲ್ವಾರ್​ ಇಡುವುದು ಅಪರಾಧವಲ್ಲ'' ಎಂದು ಹೇಳಿದ್ದಾರೆ. 

ಇದನ್ನೂ ಓದಿ: ದ್ವೇಷ ಹೋಗಲಾಡಿಸಲು 'ರಾಷ್ಟ್ರೀಯ ದ್ರಾವಿಡ ಸಂಘ: ಹಿರಿಯ ಪತ್ರಕರ್ತ ಅಗ್ನಿ ಶ್ರೀಧರ್

Similar News